ಸಿದ್ದರಾಮಯ್ಯನವರಿಗೆ ಇನ್ನೂ ಬುದ್ದಿ ಬಂದಿಲ್ಲ: ಕೆ ಎಸ್ ಈಶ್ವರಪ್ಪ | JANATA NEWS
ಬಾಗಲಕೋಟೆ : ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮ ಮಾಡಲು ಸಿದ್ದರಾಮಯ್ಯನಂತವರು ಒಬ್ಬರು ಸಾಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದರು.
ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ಮುನ್ನ ವೀರಶೈವ ಲಿಂಗಾಯತರಲ್ಲಿ ಒಡಕು ತಂದರು. ಈಗ ನಾಡಿನ ವಿವಿಧ ಸ್ವಾಮಿಗಳನ್ನು ಹಿರಿಯ ಸ್ವಾಮಿಗಳು, ಕಿರಿಯ ಸ್ವಾಮಿಗಳು ಎಂದು ಎರಡು ಭಾಗವಾಗಿ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸ್ವಾಮಿಗಳಲ್ಲಿ ವ್ಯತ್ಯಾಸ ಮಾಡಿ ಹಿರಿಯ, ಕಿರಿಯ ಎಂದು ವಿಭಾಗಿಸಿದರೆ ಏನರ್ಥ? ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಬಾಗಲಕೋಟೆಯಲ್ಲಿ ಕಿಡಿಕಾರಿದ್ದಾರೆ.
ಯಾರು ಸರ್ವವನ್ನೂ ತ್ಯಾಗ ಮಾಡಿ ಬಂದಿರ್ತಾರೋ ಅವರನ್ನು ಸ್ವಾಮೀಜಿಗಳು ಎಂದು ನಮ್ಮ ಸಮಾಜದಲ್ಲಿ ಕರೆಯುತ್ತೇವೆ. ಸಿದ್ದರಾಮಯ್ಯ ಅವರದ್ದು, ಈ ಸಾಧು ಸಂತರನ್ನು ಒಡೆಯೋ ಪ್ರಯತ್ನವಾಗಿದೆ. ಹಿರಿಯ ಸ್ವಾಮೀಜಿಗಳು ವಿರೋಧ ಮಾಡಿಲ್ಲ ಅಂತಾರೆ, ಹಾಗಾದರೆ ಇವರ ಹೇಳಿಕೆಯನ್ನ ಸ್ವಾಗತ ಮಾಡಿದ್ದಾರಾ? ಎಂದು ಪ್ರಶ್ನಿಸಿದರು
ಹಿಂದೂಗಳೆಲ್ಲ ಒಟ್ಟಾಗಿದ್ದಾರೆ, ಹಿಂದೆ ಅದರ ಪರಿಣಾಮ ಎದುರಿಸಿ ಕ್ಷೇತ್ರದಲ್ಲಿ ಸೋತಿದ್ದೀರಿ. ಸಿದ್ದರಾಮಯ್ಯನವರಿಗೆ ಇನ್ನೂ ಬುದ್ದಿ ಬಂದಿಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.