Fri,Mar29,2024
ಕನ್ನಡ / English

ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದ ಹೊರಗೆ ಬಿಜೆಪಿ ಪ್ರತಿಭಟನೆ : ಕೇಜ್ರಿವಾಲ್ ಹತ್ಯೆಗೆ ಯತ್ನ ಆಪ್ ಆರೋಪ | JANATA NEWS

31 Mar 2022
2179

ನವದೆಹಲಿ : ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಸುಳ್ಳು ಎಂದು ಹೇಳಿರುವ ಅವರ ಹೇಳಿಕೆಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿತು.

ದೆಹಲಿ ಅಸೆಂಬ್ಲಿಯಲ್ಲಿ ಮಾಡಿದ ಭಾಷಣದಲ್ಲಿ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್ಸ್ ಪ್ರಚಾರಕ್ಕಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು, "ಸುಳ್ಳು ಚಿತ್ರ" ಎಂದು ಹೇಳಿದರು.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಐಪಿ ಕಾಲೇಜಿನಿಂದ ಸಿಎಂ ನಿವಾಸದವರೆಗೆ ಧರಣಿ ನಡೆಯಿತು. ಮೆರವಣಿಗೆ ಸಿಎಂ ನಿವಾಸಕ್ಕೆ ತಲುಪುತ್ತಿದ್ದಂತೆಯೇ ಕೆಲ ಪ್ರತಿಭಟನಾಕಾರರು ಮುಂಭಾಗ ಬ್ಯಾರಿಕೇಡ್ ಧ್ವಂಸ ಮಾಡಲು ಮುಂದಾದರು. ಕೂಡಲೇ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರನ್ನು ನಿಯಂತ್ರಿಸಿ ಶಾಂತಿಯುತವಾಗಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

"ದೇಶದ ಹಿಂದೂಗಳನ್ನು ಅವಮಾನಿಸಿದ್ದಕ್ಕಾಗಿ ಕೇಜ್ರಿವಾಲ್ ಕ್ಷಮೆಯಾಚಿಸಬೇಕು ಮತ್ತು ಅವರು ಕ್ಷಮೆಯಾಚಿಸುವವರೆಗೂ [ಬಿಜೆಪಿಯ] ಯುವ ಮೋರ್ಚಾ ಅವರನ್ನು ಬಿಡುವುದಿಲ್ಲ" ಎಂದು ಸೂರ್ಯ ಟ್ವೀಟ್ ಮಾಡಿದ್ದಾರೆ.

ಆದರೆ, ಬಿಜೆಪಿಯ ಈ ಕೃತ್ಯವನ್ನು ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಕೇಜ್ರಿವಾಲ್ ಅವರ ಹತ್ಯೆಯ ಯತ್ನ, ಎಂದು ಆಮ್ ಅಡ್ಮಿ ಪಾರ್ಟಿ ಆರೋಪಿಸಿದೆ.

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಪಂಜಾಬ್‌ನಲ್ಲಿ ಎಎಪಿ ಗೆಲುವು ಮತ್ತು ಬಿಜೆಪಿ ಸೋಲಿನಿಂದಾಗಿ ಬಿಜೆಪಿ ಅರವಿಂದ್ ಕೇಜ್ರಿವಾಲ್ ಅವರನ್ನು ಹತ್ಯೆ ಮಾಡಲು ಬಯಸಿದೆ. ಬಿಜೆಪಿ ಗೂಂಡಾಗಳನ್ನು ಪೊಲೀಸರು ಉದ್ದೇಶಪೂರ್ವಕವಾಗಿ ಸಿಎಂ ಕೇಜ್ರಿವಾಲ್ ನಿವಾಸಕ್ಕೆ ಕರೆದೊಯ್ದಿದ್ದಾರೆ. ಸಿಎಂ ನಿವಾಸದ ಮುಂಭಾಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ತಡೆಗೋಡೆಗಳನ್ನು ಒಡೆದಿದ್ದಾರೆ.

ಬಿಜೆಪಿಯವರು ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಅವರು ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಇಂದಿನ ಘಟನೆಯು ಸಿಎಂ ಹತ್ಯೆಗೆ ಬಿಜೆಪಿಯ ಪೂರ್ವ ಸಂಯೋಜಿತ ಯೋಜನೆಯಾಗಿದೆ ಎಂದು ಮನೀಶ್ ಸಿಸೋಡಿಯಾ ಸುದ್ದಿ ಮಾಧ್ಯಮ ಎಏನ್ಐ ಗೆ ಹೇಳಿದ್ದಾರೆ.

RELATED TOPICS:
English summary : BJP protests outside Delhi CM Kejriwal residence : AAP accused it as attempt to murder

ಅಬಕಾರಿ ನೀತಿ ಹಗರಣ : ಇಡಿ ಬಂಧನದಿಂದ ಸಿಎಂ ಕೇಜ್ರಿವಾಲ್ ಪರಿಹಾರಕ್ಕಾಗಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ
ಅಬಕಾರಿ ನೀತಿ ಹಗರಣ : ಇಡಿ ಬಂಧನದಿಂದ ಸಿಎಂ ಕೇಜ್ರಿವಾಲ್ ಪರಿಹಾರಕ್ಕಾಗಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ
ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ
 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ
ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ

ನ್ಯೂಸ್ MORE NEWS...