ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದ ಹೊರಗೆ ಬಿಜೆಪಿ ಪ್ರತಿಭಟನೆ : ಕೇಜ್ರಿವಾಲ್ ಹತ್ಯೆಗೆ ಯತ್ನ ಆಪ್ ಆರೋಪ | JANATA NEWS
ನವದೆಹಲಿ : ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಸುಳ್ಳು ಎಂದು ಹೇಳಿರುವ ಅವರ ಹೇಳಿಕೆಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿತು.
ದೆಹಲಿ ಅಸೆಂಬ್ಲಿಯಲ್ಲಿ ಮಾಡಿದ ಭಾಷಣದಲ್ಲಿ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್ಸ್ ಪ್ರಚಾರಕ್ಕಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು, "ಸುಳ್ಳು ಚಿತ್ರ" ಎಂದು ಹೇಳಿದರು.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಐಪಿ ಕಾಲೇಜಿನಿಂದ ಸಿಎಂ ನಿವಾಸದವರೆಗೆ ಧರಣಿ ನಡೆಯಿತು. ಮೆರವಣಿಗೆ ಸಿಎಂ ನಿವಾಸಕ್ಕೆ ತಲುಪುತ್ತಿದ್ದಂತೆಯೇ ಕೆಲ ಪ್ರತಿಭಟನಾಕಾರರು ಮುಂಭಾಗ ಬ್ಯಾರಿಕೇಡ್ ಧ್ವಂಸ ಮಾಡಲು ಮುಂದಾದರು. ಕೂಡಲೇ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರನ್ನು ನಿಯಂತ್ರಿಸಿ ಶಾಂತಿಯುತವಾಗಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
"ದೇಶದ ಹಿಂದೂಗಳನ್ನು ಅವಮಾನಿಸಿದ್ದಕ್ಕಾಗಿ ಕೇಜ್ರಿವಾಲ್ ಕ್ಷಮೆಯಾಚಿಸಬೇಕು ಮತ್ತು ಅವರು ಕ್ಷಮೆಯಾಚಿಸುವವರೆಗೂ [ಬಿಜೆಪಿಯ] ಯುವ ಮೋರ್ಚಾ ಅವರನ್ನು ಬಿಡುವುದಿಲ್ಲ" ಎಂದು ಸೂರ್ಯ ಟ್ವೀಟ್ ಮಾಡಿದ್ದಾರೆ.
ಆದರೆ, ಬಿಜೆಪಿಯ ಈ ಕೃತ್ಯವನ್ನು ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಕೇಜ್ರಿವಾಲ್ ಅವರ ಹತ್ಯೆಯ ಯತ್ನ, ಎಂದು ಆಮ್ ಅಡ್ಮಿ ಪಾರ್ಟಿ ಆರೋಪಿಸಿದೆ.
ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಪಂಜಾಬ್ನಲ್ಲಿ ಎಎಪಿ ಗೆಲುವು ಮತ್ತು ಬಿಜೆಪಿ ಸೋಲಿನಿಂದಾಗಿ ಬಿಜೆಪಿ ಅರವಿಂದ್ ಕೇಜ್ರಿವಾಲ್ ಅವರನ್ನು ಹತ್ಯೆ ಮಾಡಲು ಬಯಸಿದೆ. ಬಿಜೆಪಿ ಗೂಂಡಾಗಳನ್ನು ಪೊಲೀಸರು ಉದ್ದೇಶಪೂರ್ವಕವಾಗಿ ಸಿಎಂ ಕೇಜ್ರಿವಾಲ್ ನಿವಾಸಕ್ಕೆ ಕರೆದೊಯ್ದಿದ್ದಾರೆ. ಸಿಎಂ ನಿವಾಸದ ಮುಂಭಾಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಹಾಗೂ ತಡೆಗೋಡೆಗಳನ್ನು ಒಡೆದಿದ್ದಾರೆ.
ಬಿಜೆಪಿಯವರು ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಅವರು ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಇಂದಿನ ಘಟನೆಯು ಸಿಎಂ ಹತ್ಯೆಗೆ ಬಿಜೆಪಿಯ ಪೂರ್ವ ಸಂಯೋಜಿತ ಯೋಜನೆಯಾಗಿದೆ ಎಂದು ಮನೀಶ್ ಸಿಸೋಡಿಯಾ ಸುದ್ದಿ ಮಾಧ್ಯಮ ಎಏನ್ಐ ಗೆ ಹೇಳಿದ್ದಾರೆ.