ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? | JANATA NEWS
ಬೆಂಗಳೂರು : ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಎಂದು ಪ್ರಶ್ನಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರಕಾರ, ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ. ಬಡವರು ಮನೆ ಕಟ್ಟುವ ಹಾಗಿಲ್ಲ, ಹೊಟ್ಟೆ ತುಂಬಾ ಊಟ ಮಾಡುವಂತಿಲ್ಲ, ಬಡವ ಈಗ ಬೆಳಕಲ್ಲಿಯೂ ಇರುವಂತಿಲ್ಲ. ಬಡವರ ವಿರುದ್ಧ ಬಿಜೆಪಿ ಬೆಲೆ ಏರಿಕೆ ಸಮರ ಹೂಡಿದೆಯಾ ಎನ್ನುವ ಅನುಮಾನ ನನ್ನದು ಎಂದಿದ್ದಾರೆ.
ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ
ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರಕಾರ, ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ ಎಂದು ಹೇಳಿದ್ದಾರೆ.