Thu,May09,2024
ಕನ್ನಡ / English

ವಿದ್ಯಾರ್ಥಿನಿ ಮುಸ್ಕಾನ್ ಮುಗ್ಧ ಹುಡುಗಿ, ಜನರ ಮುಗ್ಧತೆಯನ್ನು ಅಸ್ತ್ರವನ್ನಾಗಿ ಅಲ್​ಖೈದಾ ಭಯೋತ್ಪಾದಕರು ಬಳಸುತ್ತಾರೆ | JANATA NEWS

07 Apr 2022
2202

ಬೆಂಗಳೂರು : ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಬಗ್ಗೆ ಅಲ್​ಖೈದಾ ಉಗ್ರ ಸಂಘಟನೆಯ ಬೆಂಬಲ ವಿಚಾರವಾಗಿ ಸಚಿವ ಡಾ. ಕೆ.ಸುಧಾಕರ್ ಪ್ರಕ್ರಿಯಿಸಿ, ಮುಸ್ಕಾನ್ ಮುಗ್ಧ ಹುಡುಗಿ. ಆದರೆ, ಜನರ ಮುಗ್ಧತೆಯನ್ನು ಅಸ್ತ್ರವನ್ನಾಗಿ ಅಲ್​ಖೈದಾ ಭಯೋತ್ಪಾದಕರು ಬಳಸುತ್ತಾರೆ.

ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಆರೋಗ್ಯಸೌಧದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಭಯೋತ್ಪಾದಕರಿಗೆ ಜನರಲ್ಲಿ ಭಯ ಹುಟ್ಟಿಸಲು ಮಾತ್ರ ಸಾಧ್ಯವಾಗುತ್ತದೆ. ಭಯ ಹುಟ್ಟಿಸಲು ಅವರು ಜನರ ಮುಗ್ಧತೆಯನ್ನು ಮುಖ್ಯ ಅಸ್ತ್ರವಾಗಿ ಬಳಸಿಕೊಳ್ಳುತ್ತಾರೆ. ಮುಸ್ಕಾನ್ ಮುಗ್ಧ ಹುಡುಗಿ. ಆದರೆ, ಜನರ ಮುಗ್ಧತೆಯನ್ನು ಅಸ್ತ್ರವನ್ನಾಗಿ ಅಲ್​ಖೈದಾ ಭಯೋತ್ಪಾದಕರು ಬಳಸುತ್ತಾರೆ. ಇಂತಹ ಭಯೋತ್ಪಾದಕ ಸಂಘಟನೆಗಳಿಂದ ಹೆಚ್ಚು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ನಾವೆಲ್ಲರೂ ಕಾನೂನು ಪಾಲನೆ ಮಾಡಬೇಕು. ನೆಲದ ಕಾನೂನನ್ನು ಗೌರವಿಸಬೇಕು. ಜೀವನದಲ್ಲಿ ಶಿಸ್ತು ಮುಖ್ಯವಾಗಿದ್ದು, ಶಿಕ್ಷಣಕ್ಕೆ, ಶಿಕ್ಷಣ ಸಂಸ್ಥೆಗೆ ಗೌರವ ಕೊಡಬೇಕು. ಶಾಲೆಯಲ್ಲಿ ಧರ್ಮವನ್ನು ಬದಿಗಿಟ್ಟು ಶಿಕ್ಷಣಕ್ಕೆ ಗೌರವ ಕೊಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲದರಲ್ಲೂ ಒಗ್ಗಟ್ಟಿರಬೇಕು ಎಂದರು.

ಹಿಜಬ್, ಹಲಾಲ್ ಮೊದಲಾದ ಧಾರ್ಮಿಕ ವಿವಾದಗಳಲ್ಲಿ ಸರ್ಕಾರ ಯಾವುದೇ ಪಾತ್ರ ನಿರ್ವಹಿಸಿಲ್ಲ. ಆದರೆ ಕೆಲವರು ಇದು ಸರ್ಕಾರದ ಪ್ರಾಯೋಜಿತ ಎಂದು ಹೇಳುತ್ತಿದ್ದಾರೆ. ಈ ಸರ್ಕಾರ ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ನಾವೆಲ್ಲರೂ ಎಲ್ಲ ಧರ್ಮಗಳನ್ನೂ ಗೌರವದಿಂದ ಕಾಣುತ್ತೇವೆ. ಪ್ರತಿ ಧರ್ಮಕ್ಕೂ ಸಹ ನಾವು ಗೌರವ ಕೊಡುತ್ತಿದ್ದೇವೆ.

ಧರ್ಮ, ಭಾಷೆ ಮೊದಲಾದ ಭಿನ್ನತೆಗಳ ನಡುವೆಯೂ ಏಕತೆ ಇರುವುದು ಅಗತ್ಯ. ನನಗೆ ಯಾವ ಧರ್ಮವನ್ನೂ ಗುರಿಯಾಗಿಸಲು ಇಷ್ಟವಿಲ್ಲ. ನಾನೊಬ್ಬ ಸೆಕ್ಯುಲರ್ ರಾಜಕಾರಣಿ. ಪ್ರತಿಯೊಬ್ಬರಿಗೂ ಅವರ ನಂಬಿಕೆಯನ್ನು ಆಚರಿಸಲು ಸಂವಿಧಾನದಲ್ಲಿ ಅವಕಾಶವಿದೆ. ನ್ಯಾಯಾಲಯ ನೀಡುವ ತೀರ್ಪನ್ನು ಎಲ್ಲರೂ ಪಾಲಿಸಬೇಕು.

ಕಾನೂನು ಎಲ್ಲರಿಗೂ ಒಂದೇ. ಎಲ್ಲಾ ನಾಗರಿಕರು ಕಾನೂನು ಪಾಲಿಸಬೇಕು. ಯಾವುದೇ ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. ಆದರೆ ಕೆಲ ವಿಚಾರದಲ್ಲಿ ರಾಜಕೀಯ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಮಸೀದಿಗಳ ಧ್ವನಿವರ್ಧಕಗಳ ವಿಚಾರವಾಗಿ ಮಾತನಾಡಿದ ಸುಧಾಕರ್​, ಧ್ವನಿವರ್ಧಕದ ವಿಚಾರವಾಗಿ ಈಗಾಗಲೇ ಕಾನೂನುಗಳಿವೆ. ಕೆಲ ವರ್ಷಗಳ ಹಿಂದೆಯೇ ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಸ್ಪಷ್ಟ ಸೂಚನೆ ಕೊಟ್ಟಿದೆ. ಆರೋಗ್ಯದ ಮೇಲೆ ಧ್ವನಿ ಮಾಲಿನ್ಯ ಕೂಡ ಪರಿಣಾಮ ಬೀರುತ್ತದೆ ಎಂದು ಹೇಳಿದರು.

RELATED TOPICS:
English summary :Al-Qaeda terrorists use student innocence as a weapon

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...