ಈಶ್ವರಪ್ಪ ರಾಜೀನಾಮೆಗೂ ಮುನ್ನವೇ 29 ಅಧಿಕಾರಿಗಳ ವರ್ಗಾವಣೆ | JANATA NEWS
ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿರುವ ಸಚಿವ ಕೆ.ಎಸ್ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಬೆನ್ನಲ್ಲೇ 29 ಪಿಡಿಓ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ, ಆದೇಶಿಸಿದ್ದಾರೆ. ಏಪ್ರಿಲ್ 12 ರಂದು ಸಚಿವ ಈಶ್ವರಪ್ಪ ಮೈಸೂರು ಪ್ರವಾಸದಲ್ಲಿದ್ದರು.
ಈ ವೇಳೆಯೇ ಸಚಿವ ಈಶ್ವರಪ್ಪ, ಜಿಲ್ಲೆಯ 29 ಪಿಡಿಓ ಗಳನ್ನು ವರ್ಗಾವಣೆ ಮಾಡಿದ್ದಾರೆ. ಏಪ್ರಿಲ್ 12 ರಂದು ಈಶ್ವರಪ್ಪನವರು ವಿಭಾಗೀಯ ಸಭೆಯಲ್ಲಿ ಪಾಲ್ಗೊಂಡಿದ್ದು ಅಂದೇ ಉಡುಪಿಯಲ್ಲಿ ಸಂತೋಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರದಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂಬುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿ, ಆತ್ಮಹತ್ಯೆಗೆ ಶರಣಾಗಿದ್ದರು. ಈ ದಿನದಂದೇ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ರಾಜೀನಾಮೆ ಕೂಗು ಹೆಚ್ಚುತ್ತಿದ್ದಂತೆ ಕೆ.ಎಸ್ ಈಶ್ವರಪ್ಪ ತರಾತುರಿಯಲ್ಲಿ ವರ್ಗಾವಣೆ ಆದೇಶ ಮಾಡಿದ್ದು, 29 ಪಿಡಿಓ ಅಧಿಕಾರಿಗಳ ವರ್ಗಾವಣೆಯಲ್ಲೂ ಅಕ್ರಮ ನಡೆದಿದೆ ಎನ್ನಲಾಗ್ತಿದೆ.