ಹರ್ಷ ಕೊಲೆಗೆ ಪ್ರತೀಕಾರವಾಗಿ ಕೊಲೆ ಸಂಚು! | JANATA NEWS
ಶಿವಮೊಗ್ಗ : ಬಜರಂಗ ದಳದ ಕಾರ್ಯಕರ್ತ ಹರ್ಷನ ಹತ್ಯೆಗೆ ಪ್ರತಿಕಾರ ತೀರಿಸಿಕೊಳ್ಳಲು ಮತ್ತೊಂದು ಕೊಲೆಗೆ ಸಂಚು ನಡೆದಿತ್ತು.
ಮುಸ್ಲಿಂ ಯುವಕನ ಕೊಲೆಗೆ ಸಂಚು ರೂಪಿಸಿದ್ದ ಖತರ್ನಾಕ್ ಗ್ಯಾಂಗ್ನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಯತ್ನ ವಿಫಲಗೊಳಿಸಿರುವ ದೊಡ್ಡಪೇಟೆ ಠಾಣೆ ಪೊಲೀಸರು, 13 ಮಂದಿ ಮೇಲೆ ಎಫ್ಐಆರ್ ದಾಖಲಿಸಿಕೊಂಡು ಆರು ಮಂದಿಯನ್ನು ಬಂಧಿಸಿದ್ದಾರೆ. 7 ಮಂದಿ ತಲೆಮರೆಸಿಕೊಂಡಿದ್ದಾರೆ.
ಫೆ.20ರಂದು ರಾತ್ರಿ ಹರ್ಷ ಕೊಲೆಯಾಗಿದ್ದು, ಮರುದಿನ ಅಂದರೆ ಫೆ.21ರ ಬೆಳಗ್ಗೆ 11.30ರ ವೇಳೆಗೆ ಸೀಗೆಹಟ್ಟಿ ಸಮೀಪದ ಲಾಲ್ ಬಂದ್ ವಾಡಿಯ ಮುಸ್ಲಿಂ ಯುವಕನ ಕೊಲೆಗೆ 13 ಮಂದಿ ಸಂಚು ರೂಪಿಸಿ ಹಲ್ಲೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕಿ ಅಲಿಯಾಸ್ ಕುಳ್ಳ ರಾಕಿಯನ್ನು ಬಂಧಿಸಿದ್ದರು. ತೀವ್ರ ವಿಚಾರಣೆಗೆ ಒಳಪಡಿಸಿದಾಗ 12 ಜನರ ಹೆಸರನ್ನು ಬಾಯ್ಬಿಟ್ಟಿದ್ದ ಎನ್ನಲಾಗಿದೆ.