ಮದುವೆಗೆಂದು ಹೋಗುತ್ತಿದ್ದ ಕಾರುಗಳು ಮುಖಾಮುಖಿ ಡಿಕ್ಕಿ, ಸ್ಥಳದಲ್ಲಿಯೇ ಮೂವರ ಸಾವು! | JANATA NEWS
ರಾಯಚೂರು : ಮದುವೆಗೆಂದು ಹೋಗುತ್ತಿದ್ದ ಕಾರುಗಳು ಮುಖಾಮುಖಿ ಡಿಕ್ಕಿಯಾದ ದಾರುಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲೂಕಿನ ಗೊಲ್ಲಪಲ್ಲಿ ಸಮೀಪ ನಡೆದಿದೆ.
ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ, ನಾಲ್ವರ ಸ್ಥಿತಿ ಗಂಭೀರವಾಗಿದೆ.ಅಮರೇಶ್ (30), ಗೋವಿಂದ್ (35) ದೇವರಾಜ್ (34)ಮೃತ ದುರ್ದೈವಿಗಳು.
ಬೆಂಗಳೂರು ಕಡೆಯಿಂದ ಯಾದಗಿರಿಗೆ ಹೋಗ್ತಿದ್ದ ಕಾರಿನಲ್ಲಿದ್ದ ಐವರು ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಯಾದಗಿರಿ ಜಿಲ್ಲೆಯ ವಡಗೇರದವರಾಗಿದ್ದು, ಬೆಂಗಳೂರಿನಿಂದ ಮದುವೆಗೆಂದು ಸ್ವಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
English summary :Accident in Rayachuru