Tue,Apr23,2024
ಕನ್ನಡ / English

ಇಂತಹ ನೂರು ಜನರು ಮಸಿ ಬಳಿಯುವ ಪ್ರಯತ್ನ ಮಾಡಿದ್ರು ಅದಕ್ಕೆ ನಾನು ಹೆದರುವುದಿಲ್ಲ. | JANATA NEWS

02 May 2022
3088

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ತಮ್ಮ ಸಹೋದರ ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಸಚಿವ ಸಿಎನ್ ಅಶ್ವಥ್ ನಾರಾಯಣ್ ಅವರು, ಅಶ್ವತ್ಥ ನಾರಾಯಣ್ ಮೇಲೆ ಇಂತಹ ನೂರು ಜನರು ಮಸಿ ಬಳಿಯುವ ಪ್ರಯತ್ನ ಮಾಡಿದ್ರು ಅದಕ್ಕೆ ನಾನು ಹೆದರುವುದಿಲ್ಲ ಎಂದಿದ್ದಾರೆ.

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ತಮ್ಮ ಕುಟುಂಬದ ಹೆಸರು ಕೇಳಿಬಂದ ನಂತರ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅಶ್ವಥ್ ನಾರಾಯಣ್ ಅವರು, ಗಾಳಿಯಲ್ಲಿ ಗುಂಡು ಹಾರಿಸುವ KPCC ಅಧ್ಯಕ್ಷರ ಕೀಳುಮಟ್ಟದ ರಾಜಕಾರಣ ಇಂದು ನಿನ್ನೆಯದಲ್ಲ. ನಿರಾಧಾರ ಆರೋಪ ಮಾಡುವ ಬದಲು ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.

ಅಕ್ರಮದಲ್ಲಿ ಭಾಗಿಯಾದವರಿಗೆ ಶಿಕ್ಷೆ ಆಗುತ್ತೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಸಚಿವ ಅಶ್ವತ್ಥ್​ ನಾರಾಯಣ್​ ಹೇಳಿದ್ದಾರೆ. ಆಧಾರ ಸಹಿತವಾಗಿ ಒಂದೇ ಒಂದು ಹೇಳಿಕೆಯನ್ನು ಅವ್ರು ಕೊಟ್ಟಿಲ್ಲ, ಅವನು ಯಾವ ವ್ಯಕ್ತಿ ಎಂಬುದೇ ನನಗೆ ಗೊತ್ತಿಲ್ಲ. ನನ್ನ ರಾಜಕೀಯ ಜೀವನ ಪಾರದರ್ಶಕವಾಗಿದೆ ಎಂದು ಸಚಿವ ಆಶ್ವತ್ಥ ನಾರಾಯಣ ಹೇಳಿದ್ದಾರೆ.

ರಾಮನಗರ ಜಿಲ್ಲೆ ಇವರನ್ನು ಸಂಪೂರ್ಣವಾಗಿ ಯಾರು ಒಪ್ಪಿಲ್ಲ, ಅವರು ಬರೀ ಕನಕಪುರಕ್ಕೆ ಮಾತ್ರ ಸೀಮಿತ ಆಗಿದ್ದಾರೆ. ಆಧಾರ ಇಲ್ಲದೇ ಯಾರಾದರೂ ಆರೋಪ ಮಾಡ್ತಾರಾ ಎಂದು ಪ್ರಶ್ನೆ ಮಾಡಿದ್ರು. ಒಬ್ಬ ಮುಖ್ಯಮಂತ್ರಿ ಆಗ್ತಿದ್ದಾರೆ ಅಂತ ಅವ್ರೇ ಅಂದುಕೊಂಡು ಆರೋಪ ಮಾಡ್ತಾರೆ ಅಂದರೆ, ನನ್ನ ಕಂಡರೆ ಅವರಿಗೆ ಎಷ್ಟು ಭಯ ಇರಬಹುದು ಎಂದು ನೀವೇ ನೋಡಿ ಎಂದಿದ್ದಾರೆ.

ನನ್ನಂತ ವ್ಯಕ್ತಿ ಮೇಲೆ ಆರೋಪ ಮಾಡ್ತಾರೆ ಅಂದರೆ ಇವರನ್ನು ಸುಮ್ಮನೆ ಬಿಡೋಕೆ ಆಗುತ್ತಾ?, ಡಿ.ಕೆ ಶಿವಕುಮಾರ್​ ಬಂಡವಾಳವನ್ನು ಒಂದೊಂದಾಗಿಯೇ ಬಿಚ್ಚಿಡುತ್ತೇನೆ ಎಂದಿದ್ದಾರೆ..

ಡಿಕೆಶಿ ಒಬ್ಬ ಕಡು ಭ್ರಷ್ಟ ಅಂತಾ ಇದೇ ಉಗ್ರಪ್ಪ ಹೇಳಿದ್ದ. ಇವನಿಗೆ ನಾಚಿಕೆ ಆಗೋಲ್ವಾ?, ನಮ್ಮ ಕುಟುಂಬ ಏನು ಡಿಕೆಶಿ ಕುಟುಂಬ ತರ ಅಲ್ಲ, ಕೆಲ ರಾಜಕಾರಣಿಗಳು ಎಲ್ಲವನ್ನೂ ಬಿಟ್ಟಿರ್ತಾರೆ. ಅಶ್ವತ್ಥ ನಾರಾಯಣ್ ಮೇಲೆ ಇಂತಹ ನೂರು ಜನರು ಮಸಿ ಬಳಿಯುವ ಪ್ರಯತ್ನ ಮಾಡಿದ್ರು ಅದಕ್ಕೆ ನಾನು ಹೆದರುವುದಿಲ್ಲ ಎಂದಿದ್ದಾರೆ.

RELATED TOPICS:
English summary : I dont care if a hundred people tried to soot.

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...