ಸರ್ಕಾರದಿಂದ ಹೊಸ ಸಹಾಯವಾಣಿ ಲೋಕಾರ್ಪಣೆ! | JANATA NEWS
ಬೆಂಗಳೂರು : ಜನರ ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡಲು ವಿಶೇಷವಾಗಿ ಕಲ್ಯಾಣ ಮಿತ್ರ ಎಂಬ ಸಹಾಯವಾಣಿ ಪ್ರಾರಂಭ ಮಾಡಿದೆ.
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಹಾಗೂ ಕುಂದುಕೊರತೆಗಳ ಪರಿಹಾರಕ್ಕಾಗಿ ಇಲಾಖೆಯ “ಕಲ್ಯಾಣ ಮಿತ್ರ” ಏಕೀಕೃತ ಎಸ್.ಸಿ/ಎಸ್.ಟಿ (SC, ST) 24×7 ಸಹಾಯವಾಣಿ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೂತನ ಸಹಾಯವಾಣಿ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
English summary :New Helpline from Government