ಅತಿಯಾದ ಮೊಬೈಲ್ ಬಳಕೆ ಮಾಡಬೇಡಾ ಎಂದು ಬುದ್ದಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ | JANATA NEWS
ಕಾರವಾರ : ಅತಿಯಾಗಿ ಮೊಬೈಲ್ ಬಳಕೆ ಮಾಡದಂತೆ ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮುನಿಸಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹಬ್ಬುವಾಡದಲ್ಲಿ ನಡೆದಿದೆ.
ಮೇಘ (20)ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದು, ಮೃತ ಯುವತಿಯ ಕುಟಂಬ ಮೂಲತಃ ಸಿದ್ದಾಪುರ ತಾಲ್ಲೂಕಿನವರು. ಕಾರವಾರದ ಹುಬ್ಬುವಾಡದಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬಸ್ಥರು ವಾಸವಾಗಿದ್ದರು.
ಪ್ಯಾರಾಮೆಡಿಕಲ್ ಕೋರ್ಸ್ ಮುಗಿಸಿಕೊಂಡು ಮನೆಯಲ್ಲಿದ್ದ ಯುವತಿ ಮೊಬೈಲ್ ಅತಿಯಾಗಿ ಬಳಕೆ ಮಾಡುವುದನ್ನು ಗಮನಿಸಿದ ಪಾಲಕರು ಬೈದು ಬುದ್ದಿವಾದ ಹೇಳಿದ್ದರಂತೆ. ಇದಕ್ಕೆ ಕೋಪಗೊಂಡ ಯುವತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗ್ತಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :A young woman commits suicide after her intelligence says not to use excessive mobile