ಸಂಪೂರ್ಣ ತನಿಖೆ ಬಳಿಕವೇ ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ: ಆರಗ ಜ್ಞಾನೇಂದ್ರ | JANATA NEWS
ಕಲಬುರಗಿ : ಪಿಎಸ್ಐ ನೇಮಕಾತಿ ಅಕ್ರಮ ತನಿಖೆ ಪೂರ್ಣಗೊಂಡ ಬಳಿಕವೇ ಪಿಎಸ್ಐ ನೇಮಕಾತಿಗಾಗಿ ಮರು ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
545 ಪಿಎಸ್ಐ ನೇಮಕಾತಿ ಅಕ್ರಮ ಕುರಿತಂತೆ ಸಿಐಡಿ ಅಧಿಕಾರಿಗಳು ಉತ್ತಮ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಇದಕ್ಕಾಗಿ ಉತ್ತಮ ಅಧಿಕಾರಿಗಳನ್ನು ನೇಮಿಸಿದ್ದೇವೆ. ಅವರ ತನಿಖೆಯಲ್ಲಿ ಯಾವುದೇ ಅನುಮಾನವೇ ಬೇಡ. ಈ ಪ್ರಕರಣದಲ್ಲಿ ಯಾರೇ ಬಾಗಿಯಾಗಿದ್ದರೂ, ಕೈಬಿಡೋ ಪ್ರಶ್ನೆಯೇ ಇಲ್ಲ ಎಂದರು.
ಈಗಾಗಲೇ 47 ಜನರನ್ನು ಬಂಧಿಸಲಾಗಿದೆ.ಈ ಭಾಗದ ಕೆಲವು ಅಭ್ಯರ್ಥಿಗಳು ಓಎಂಆರ್ ಶೀಟ್ ನನ್ನ ಗಮನಕ್ಕೆ ಬಂದ ಕೂಡಲೇ ಖುದ್ದಾಗಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದಿದ್ದಾರೆ.
ದೈಹಿಕ ಪರೀಕ್ಷೆ ಯಲ್ಲಿ ಅಕ್ರಮ ನಡೆದಿಲ್ಲ.ಸಂಪೂರ್ಣ ತನಿಖೆ ಮುಗಿದ ಬಳಿಕವೇ ಪಿಎಸ್ ಐ ನೇಮಕಾತಿ ಮರುಪರೀಕ್ಷೆ ನಡೆಸಲಾಗುವುದು ಎಂದರು.
ನಮ್ಮ ಉದ್ದೇಶ ನಾನು ಒಬ್ಬ ಹೋಮ್ ಮಿನಿಸ್ಟರ್ ಆದರೂ ನನ್ನ ಅಕ್ಕನ ಮಗಳಿಗೆ ಏನೂ ಸಹಾಯ ಮಾಡಿಲ್ಲ, ನಾನು ಪ್ರಾಮಾಣಿಕವಾಗಿ ಬದುಕಿದ್ದೇನೆ. ನಮ್ಮ ಸಂಬಂಧಿಕರಿಗೂ ಸಹಕಾರ ಮಾಡಿಲ್ಲ ಎಂದು ಹೇಳಿದರು.
ಓಎಂಆರ್ ಶೀಟ್ ತಿದ್ದುಪಡಿ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದ ತನಿಖೆ ಸಂಪೂರ್ಣಗೊಂಡ ಬಳಿಕವೇ ಮರು ಪರೀಕ್ಷೆಗೆ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದರು.