Fri,Apr26,2024
ಕನ್ನಡ / English

ಕಾರಲ್ಲೇ ಪೆಟ್ರೋಲ್ ಸುರಿದುಕೊಂಡು ಸುಟ್ಟು ಕರಕಲಾದ ಯುವಜೋಡಿ | JANATA NEWS

23 May 2022
3945

ಉಡುಪಿ : ಪ್ರೇಮಿಗಳು ಹೆಗ್ಗುಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊತ್ತಾರು ಎಂಬಲ್ಲಿ ಪೆಟ್ರೋಲ್​ ಸುರಿದುಕೊಂಡು ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಜ್ಯೋತಿ ಚೋಳನಾಯಕನ ಹಳ್ಳಿ ನಿವಾಸಿಯಾಗಿದ್ದು, ಯಶವಂತ್​ ಮುನಿಯಪ್ಪ ಲೇಔಟ್​ ನಿವಾಸಿ. ಜ್ಯೋತಿ ಒಂದು ವರ್ಷದ ಹಿಂದೆ ಬಿ.ಕಾಂ. ಮುಗಿಸಿದ್ದರು. ಯಶವಂತ್​ ಪದವಿ ಮುಗಿಸಿ ಕಂಪ್ಯೂಟರ್​ ಕೋರ್ಸ್​ ಮಾಡುತ್ತಿದ್ದರು. ಇಂಟರ್​ವ್ಯೂಗೆ ಹೋಗಿ ಬರುವುದಾಗಿ ಹೇಳಿದ್ದ ಜ್ಯೋತಿ ಮರಳಿ ಮನೆಗೆ ಬಾರದ ಕಾರಣ ಪಾಲಕರು ಮೇ 19ರಂದು ಪೊಲೀಸರಿಗೆ ದೂರು ನೀಡಿದ್ದರು. ಯಶವಂತ್​ ಕೂಡ ಟ್ಯಾಲಿ ಕ್ಲಾಸ್​ಗೆಂದು ಹೋಗಿದ್ದು, ಹಿಂತಿರುಗದ ಬಗ್ಗೆ ಹೆತ್ತವರು ಮೇ 21ರಂದು ದೂರು ದಾಖಲಿಸಿದ್ದರು.

ಬೆಂಗಳೂರು ಆರ್.ಟಿ.ನಗರದ 23 ವರ್ಷದ ಯಶವಂತ ಯಾದವ್, ಜ್ಯೋತಿ ಮೃತಪಟ್ಟ ಯುವ ಜೋಡಿಗಳಾಗಿದ್ದಾರೆ. ಮಂಗಳೂರಿಗೆ ಬಂದ ಈ ಜೋಡಿ ನಗರದ ಮಿಲಾಗ್ರಿಸ್​ನ ಕಾರು ರೆಂಟಲ್​ ಸರ್ವೀಸ್​ನಲ್ಲಿ ಒಂದು ದಿನಕ್ಕೆ ಸೆಲ್ಫ್​ ಡ್ರೈವ್​ ಕಾರು ಬುಕ್​ ಮಾಡಿದ್ದರು. ಮಂಗಳೂರಿನ ಬೀಚ್​ಗಳು, ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಬಳಿಕ ಜೋಡಿ ಉಡುಪಿಗೆ ತೆರಳಿತ್ತು. ಮಂಗಳೂರಿನಲ್ಲಿ ಬಾಡಿಗೆ ಮನೆ ಮಾಡಿದ್ದರು ಎನ್ನಲಾಗಿದೆ.

5,000 ಪಾವತಿಸಿ ಆಧಾರ್ ಕೊಟ್ಟು ಬಾಡಿಗೆ ಕಾರು ಪಡೆದಿದ್ದರು. ಆಧಾರ್​ ಕಾರ್ಡಿನ ಆಧಾರದಲ್ಲಿ ಅವರ ವಿಳಾಸವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಆತ್ಮಹತ್ಯೆಗೂ ಮುನ್ನ ಯಶವಂತ್​ ಮೊಬೈಲ್​ನಿಂದ ಮನೆಯವರಿಗೆ ಸಂದೇಶ ರವಾನಿಸಿದ್ದ. 'ಹೆತ್ತವರನ್ನು ಬಿಟ್ಟು ಬದುಕಲಾರೆವು. ಪ್ರೀತಿಸಿದಾಕೆಗೂ ಮೋಸ ಮಾಡಲಾರೆ. ನಮಗೆ ಬಾಡಿಗೆ ಮನೆ, ಉದ್ಯೋಗ ಸಿಕ್ಕಿದೆ. ಆದರೂ ನಾವು ಸಂತೋಷವಾಗಿಲ್ಲ. ಹಾಗಾಗಿ ಕೆಟ್ಟ ನಿರ್ಧಾರ ತೆಗೆದುಕೊಳ್ಳುತ್ತಿದ್ದೇವೆ, ಕ್ಷಮಿಸಿ' ಎಂದು ಮೆಸೇಜ್​ ಕಳುಹಿಸಿದ್ದ. ಜತೆಗೆ ತಾವಿದ್ದ ಲೊಕೇಶನ್​ ಮಾಹಿತಿಯನ್ನೂ ಯಶವಂತ್​ ಶೇರ್​ ಮಾಡಿದ್ದ. ಯುವತಿ ಜ್ಯೋತಿಯ ಹೆತ್ತವರಿಗೂ ಯಶವಂತ್​ ಮೊಬೈಲ್​ನಿಂದ ಮೆಸೇಜ್ ಕಳುಹಿಸಲಾಗಿತ್ತು ಎನ್ನಲಾಗಿದೆ.

ಮದುವೆಯ ಫೋಟೋಗಳನ್ನು ಮನೆಯವರಿಗೆ ಕಳುಹಿಸಿದಾಗ ವಿರೋಧ ವ್ಯಕ್ತವಾಗಿತ್ತು. ಇದರಿಂದ ಆತಂಕಕ್ಕೆ ಒಳಗಾದ ಜೋಡಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

RELATED TOPICS:
English summary :Petrol poured in the car and burned

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...