Sun,May19,2024
ಕನ್ನಡ / English

ಕಾರಲ್ಲೇ ಪೆಟ್ರೋಲ್ ಸುರಿದುಕೊಂಡು ಸುಟ್ಟು ಕರಕಲಾದ ಯುವಜೋಡಿ | JANATA NEWS

23 May 2022
3951

ಉಡುಪಿ : ಪ್ರೇಮಿಗಳು ಹೆಗ್ಗುಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊತ್ತಾರು ಎಂಬಲ್ಲಿ ಪೆಟ್ರೋಲ್​ ಸುರಿದುಕೊಂಡು ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಜ್ಯೋತಿ ಚೋಳನಾಯಕನ ಹಳ್ಳಿ ನಿವಾಸಿಯಾಗಿದ್ದು, ಯಶವಂತ್​ ಮುನಿಯಪ್ಪ ಲೇಔಟ್​ ನಿವಾಸಿ. ಜ್ಯೋತಿ ಒಂದು ವರ್ಷದ ಹಿಂದೆ ಬಿ.ಕಾಂ. ಮುಗಿಸಿದ್ದರು. ಯಶವಂತ್​ ಪದವಿ ಮುಗಿಸಿ ಕಂಪ್ಯೂಟರ್​ ಕೋರ್ಸ್​ ಮಾಡುತ್ತಿದ್ದರು. ಇಂಟರ್​ವ್ಯೂಗೆ ಹೋಗಿ ಬರುವುದಾಗಿ ಹೇಳಿದ್ದ ಜ್ಯೋತಿ ಮರಳಿ ಮನೆಗೆ ಬಾರದ ಕಾರಣ ಪಾಲಕರು ಮೇ 19ರಂದು ಪೊಲೀಸರಿಗೆ ದೂರು ನೀಡಿದ್ದರು. ಯಶವಂತ್​ ಕೂಡ ಟ್ಯಾಲಿ ಕ್ಲಾಸ್​ಗೆಂದು ಹೋಗಿದ್ದು, ಹಿಂತಿರುಗದ ಬಗ್ಗೆ ಹೆತ್ತವರು ಮೇ 21ರಂದು ದೂರು ದಾಖಲಿಸಿದ್ದರು.

ಬೆಂಗಳೂರು ಆರ್.ಟಿ.ನಗರದ 23 ವರ್ಷದ ಯಶವಂತ ಯಾದವ್, ಜ್ಯೋತಿ ಮೃತಪಟ್ಟ ಯುವ ಜೋಡಿಗಳಾಗಿದ್ದಾರೆ. ಮಂಗಳೂರಿಗೆ ಬಂದ ಈ ಜೋಡಿ ನಗರದ ಮಿಲಾಗ್ರಿಸ್​ನ ಕಾರು ರೆಂಟಲ್​ ಸರ್ವೀಸ್​ನಲ್ಲಿ ಒಂದು ದಿನಕ್ಕೆ ಸೆಲ್ಫ್​ ಡ್ರೈವ್​ ಕಾರು ಬುಕ್​ ಮಾಡಿದ್ದರು. ಮಂಗಳೂರಿನ ಬೀಚ್​ಗಳು, ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಬಳಿಕ ಜೋಡಿ ಉಡುಪಿಗೆ ತೆರಳಿತ್ತು. ಮಂಗಳೂರಿನಲ್ಲಿ ಬಾಡಿಗೆ ಮನೆ ಮಾಡಿದ್ದರು ಎನ್ನಲಾಗಿದೆ.

5,000 ಪಾವತಿಸಿ ಆಧಾರ್ ಕೊಟ್ಟು ಬಾಡಿಗೆ ಕಾರು ಪಡೆದಿದ್ದರು. ಆಧಾರ್​ ಕಾರ್ಡಿನ ಆಧಾರದಲ್ಲಿ ಅವರ ವಿಳಾಸವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಆತ್ಮಹತ್ಯೆಗೂ ಮುನ್ನ ಯಶವಂತ್​ ಮೊಬೈಲ್​ನಿಂದ ಮನೆಯವರಿಗೆ ಸಂದೇಶ ರವಾನಿಸಿದ್ದ. 'ಹೆತ್ತವರನ್ನು ಬಿಟ್ಟು ಬದುಕಲಾರೆವು. ಪ್ರೀತಿಸಿದಾಕೆಗೂ ಮೋಸ ಮಾಡಲಾರೆ. ನಮಗೆ ಬಾಡಿಗೆ ಮನೆ, ಉದ್ಯೋಗ ಸಿಕ್ಕಿದೆ. ಆದರೂ ನಾವು ಸಂತೋಷವಾಗಿಲ್ಲ. ಹಾಗಾಗಿ ಕೆಟ್ಟ ನಿರ್ಧಾರ ತೆಗೆದುಕೊಳ್ಳುತ್ತಿದ್ದೇವೆ, ಕ್ಷಮಿಸಿ' ಎಂದು ಮೆಸೇಜ್​ ಕಳುಹಿಸಿದ್ದ. ಜತೆಗೆ ತಾವಿದ್ದ ಲೊಕೇಶನ್​ ಮಾಹಿತಿಯನ್ನೂ ಯಶವಂತ್​ ಶೇರ್​ ಮಾಡಿದ್ದ. ಯುವತಿ ಜ್ಯೋತಿಯ ಹೆತ್ತವರಿಗೂ ಯಶವಂತ್​ ಮೊಬೈಲ್​ನಿಂದ ಮೆಸೇಜ್ ಕಳುಹಿಸಲಾಗಿತ್ತು ಎನ್ನಲಾಗಿದೆ.

ಮದುವೆಯ ಫೋಟೋಗಳನ್ನು ಮನೆಯವರಿಗೆ ಕಳುಹಿಸಿದಾಗ ವಿರೋಧ ವ್ಯಕ್ತವಾಗಿತ್ತು. ಇದರಿಂದ ಆತಂಕಕ್ಕೆ ಒಳಗಾದ ಜೋಡಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

RELATED TOPICS:
English summary :Petrol poured in the car and burned

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...