ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ | JANATA NEWS
ಬಾಗಲಕೋಟೆ : ಶಾಲೆ ಮುಗಿಸಿ ಮನೆಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾದರೆ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಐಹೊಳೆ ಸಮೀಪದ ಕ್ಯಾದಿಗೇರಿ ಕ್ರಾಸ್ ಬಳಿ ಸಂಭವಿಸಿದೆ.
ವಿದ್ಯಾರ್ಥಿನಿಯರಾದ ನೇತ್ರಾವತಿ ರಗಟಿ (14), ಅಂಜಲಿ ಸೂಡಿ (14) ಸಾವಿಗೀಡಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲಾ ವಿದ್ಯಾರ್ಥಿಗಳು ಐಹೊಳೆಯಿಂದ ಚಿಲ್ಲಾಪುರಕ್ಕೆ ಶಾಲೆಯನ್ನು ಮುಗಿಸಿ ಮನೆಗೆ ತೆರಳುತ್ತಿದ್ದರು ಎನ್ನಲಾಗಿದೆ. ವೇಗವಾಗಿ ಬಂದಂತ ಕಾರು ವಿದ್ಯಾರ್ಥಿಗಳಿಗೆ ಡಿಕ್ಕಿಯಾಗಿದೆ. ಚಾಲಕ ಅಪಘಾತದ ಬಳಿಕ ಪರಾರಿಯಾಗಿದ್ದಾನೆ. ಈ ಸಂಬಂಧ ಅಮೀನಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Car collides with students on their way home from school, two dead on the spot, three seriously injured