Sun,May19,2024
ಕನ್ನಡ / English

ಸರಕಾರಿ ವಿಚಾರದಲ್ಲಿ ಭವಿಷ್ಯ ಹೇಳುವವರನ್ನು ಕೂಡ ಬಂಧಿಸಬೇಕು | JANATA NEWS

25 May 2022
3584

ಬೆಂಗಳೂರು : ಮಂಗಳೂರಿನ ಮಳಲಿ ಮಸೀದಿ ವಿಚಾರವಾಗಿ ತಾಂಬೂಲ ಪ್ರಶ್ನೆ ಕೇಳುವ ವಿಚಾರ ಸಂಬಂಧ ಸರ್ಕಾರ, ಪೊಲೀಸ್ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಬೇಕು. ಸರಕಾರಿ ವಿಚಾರದಲ್ಲಿ ಭವಿಷ್ಯ ಹೇಳುವವರನ್ನು ಕೂಡ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಮಂಗಳೂರಿನ ಮಳಲಿ ಮಸೀದಿ ವಿಚಾರವಾಗಿ ತಾಂಬೂಲ ಪ್ರಶ್ನೆ ಕೇಳಲು ವಿಶ್ವ ಹಿಂದೂ ಪರಿಷತ್ ನಾಯಕರು ಹಾಗೂ ಬಿಜೆಪಿ ಶಾಸಕರು ಮುಂದಾಗಿದ್ದಾರೆ. ಬಿಜೆಪಿ ಸರ್ಕಾರ ಈ ರಾಜ್ಯವನ್ನು ಕೊಲ್ಲುತ್ತಿದೆ.

ಬಿಜೆಪಿಯವರು ತಮ್ಮ ನಂಬಿಕೆ, ಸ್ವಂತ ವಿಚಾರದಲ್ಲಿ ಏನಾದರೂ ಮಾಡಿಕೊಳ್ಳಲಿ. ಅವರ ವೈಯಕ್ತಿಕ ನಂಬಿಕೆ, ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಇದರಿಂದ ರಾಜ್ಯಕ್ಕೆ ಎಷ್ಟು ಹಾನಿಯಾಗುತ್ತದೆ ಎನ್ನುವುದನ್ನು ಅವರು ಅರ್ಥ ಮಾಡಿಕೊಳ್ಳಬೇಕು.

ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನು ತಮ್ಮ ಮನೆಯಲ್ಲಿ ಇಟ್ಟುಕೊಳ್ಳಬೇಕು. ಸರ್ಕಾರದಲ್ಲಿ ಅಲ್ಪಸಂಖ್ಯಾತರ ಸಚಿವಾಲಯ, ಹಿಂದೂಗಳಿಗಾಗಿ ಮುಜರಾಯಿ ಇಲಾಖೆ ಇದೆ. ಸರ್ಕಾರಿ ಅಧಿಕಾರಿಗಳು ಇದ್ದಾರೆ. ಹೀಗಾಗಿ ಸರಕಾರದ ವಿಚಾರದಲ್ಲಿ ಸಂಘಟನೆಗಳು ಹಸ್ತಕ್ಷೇಪ ಮಾಡುವುದು ಸರಿಯಲ್ಲ. ಸರ್ಕಾರ ಕೂಡಲೇ ಇವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕು.

ಇಂತಹ ವಿಚಾರದಲ್ಲಿ ಕಾನೂನು-ಸುವ್ಯವಸ್ಥೆ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ನಾವು ಹೋರಾಡುತ್ತೇವೆ ಎಂದು ನನಗೆ ಅನೇಕ ಕರೆಗಳು ಬರುತ್ತಿವೆ. ಇದರಿಂದ ಶಾಂತಿ ಸುವ್ಯವಸ್ಥೆಗೆ ಭಂಗವಾಗುತ್ತದೆ, ಹೀಗಾಗಿ ಈ ವಿಚಾರಕ್ಕೆ ಹೋಗಬೇಡಿ ಎಂದು ನಾನೇ ಸಮಾಧಾನ ಮಾಡುತ್ತಿದ್ದೇನೆ.

ಭವಿಷ್ಯ ಕೇಳುವವರು, ಶಕುನ ಕೇಳುವವರು, ಜ್ಯೋತಿಷ್ಯ ಕೇಳುವವರಿಗೆ ನಾವು ಅಡ್ಡಿ ಮಾಡುವುದಿಲ್ಲ. ಇದೆಲ್ಲವೂ ವೈಯಕ್ತಿಕ ವಿಚಾರವಾಗಿದ್ದು, ಸಾರ್ವಜನಿಕ ವಿಚಾರವಲ್ಲ. ಅನಗತ್ಯ ಗೊಂದಲ ಸೃಷ್ಟಿಸುವುದನ್ನು ನಾನು ಖಂಡಿಸುತ್ತೇನೆ. ಈ ವಿಚಾರದಲ್ಲಿ ಸರ್ಕಾರ, ಪೊಲೀಸ್ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಬೇಕು. ಸರಕಾರಿ ವಿಚಾರದಲ್ಲಿ ಭವಿಷ್ಯ ಹೇಳುವವರನ್ನು ಕೂಡ ಬಂಧಿಸಬೇಕು ಎಂದಿದ್ದಾರೆ.

RELATED TOPICS:
English summary :Government propagandists should also be arrested

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...