ಡಿ.ಕೆ.ಶಿವಕುಮಾರ್ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಕೆ | JANATA NEWS
ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಆರೋಪಪಟ್ಟಿ ಸಲ್ಲಿಸಿದೆ.
ಆದಾಯ ತೆರಿಗೆ(ಐಟಿ) ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಕುಮಾರ್ ಸದ್ಯ ಜಾಮೀನಿನ ಮೇಲೆ ಇದ್ದಾರೆ.
ಸೆಪ್ಟೆಂಬರ್ 2018 ರಲ್ಲಿ ಫೆಡರಲ್ ತನಿಖಾ ಸಂಸ್ಥೆ ಡಿಕೆ.ಶಿವಕುಮಾರ್ ಮತ್ತು ಇತರರ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿತ್ತು. ತೆರಿಗೆ ವಂಚನೆ ಮತ್ತು ಹವಾಲಾ ವ್ಯವಹಾರದ ಆರೋಪದ ಮೇಲೆ ಬೆಂಗಳೂರಿನ ನ್ಯಾಯಾಲಯದಲ್ಲಿ ಡಿಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಆದಾಯ ತೆರಿಗೆ ಇಲಾಖೆ ಆರೋಪಪಟ್ಟಿಯನ್ನು ಆಧರಿಸಿ ಪ್ರಕರಣವನ್ನು ದಾಖಲಿಸಲಾಗಿದೆ.
ಈ ಪ್ರಕರಣದಲ್ಲಿ 2019 ರಲ್ಲಿ ಡಿಕೆ ಶಿವಕುಮಾರ್ ಅವರನ್ನು ಇಡಿ ಬಂಧಿಸಿತ್ತು ಮತ್ತು ಅವರ ಪುತ್ರಿ ಐಶ್ವರ್ಯ ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವಾರು ಜನರು ಮತ್ತು ಸಹಚರರನ್ನು ಸಂಸ್ಥೆಯು ವಿಚಾರಣೆಗೆ ಒಳಪಡಿಸಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಚಾರ್ಜ್ಶೀಟ್ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು ದೇಶದ ಕಾನೂನಿನಲ್ಲಿ ನಂಬಿಕೆ ಇಟ್ಟಿದ್ದೇನೆ. ನನಗೂ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇದೆ. ಇದೆಲ್ಲವೂ ರಾಜಕೀಯ ಪ್ರೇರಿತ, ಎಂದು ಹೇಳಿದ್ದಾರೆ.