ಬೆಂಗಳೂರಲ್ಲಿ ಮತ್ತೆ ಮಹಿಳೆ ಮೇಲೆ ಆಯಸಿಡ್ ಅಟ್ಯಾಕ್: ಆರೋಪಿ ಬಂಧನ | JANATA NEWS
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಆಯಸಿಡ್ ದಾಳಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗೋರಿಪಾಳ್ಯ ನಿವಾಸಿ ಅಹಮ್ಮದ್ ಬಂಧಿತ ಆರೋಪಿ. ದಾಳಿಗೊಳಗಾದ ಸಂತ್ರಸ್ತೆಯನ್ನ ಸದ್ಯ ಸಂಜಯಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂತ್ರಸ್ರೆ ಪ್ರೀತಿಸುತ್ತಿದ್ದ ಆರೋಪಿ ತನ್ನನ್ನು ಮದುವೆಯಾಗುವಂತೆ ದುಂಬಾಲು ಬಿದ್ದಿದ್ದ. ಈ ವೇಳೆ ಮದುವೆಯಾಗಲು ಒಪ್ಪದಿದ್ದಾಗ ಮಹಿಳೆ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ.
ಮಹಿಳೆ ಕೆಎಸ್ ಲೇಔಟ್ನಿಂದ ಜೆಪಿ ನಗರ ಕಡೆಗೆ ತೆರಳುತಿದ್ದಾಗ ಈ ಕೃತ್ಯ ಎಸಗಿದ್ದಾನೆ. ಈ ದಾಳಿಯಿಂದ ಮಹಿಳೆ ಬಲಗಣ್ಣಿಗೆ ಗಂಭೀರ ಗಾಯವಾಗಿದ್ದು, ಗಾಯಾಳು ಮಹಿಳೆಯನ್ನ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
RELATED TOPICS:
English summary :An acid attack on a woman again in Bengaluru