ಸಲಿಂಗ ಲೈಂಗಿಕ ಕ್ರಿಯೆ ವಿಚಾರಕ್ಕೆ ಗಲಾಟೆ, ಕೊಲೆ | JANATA NEWS
ಬೆಂಗಳೂರು : ಸಲಿಂಗಕಾಮಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ.
ಮೂಡಲಪಾಳ್ಯ ನಿವಾಸಿ ಆಟೋ ಚಾಲಕ ರಕ್ಷಿತ್ ಗೌಡ ಬಂಧಿತ ಆರೋಪಿ. ಪ್ರದೀಪ್ ಎಂಬಾತ ಕೊಲೆಯಾದ ವ್ಯಕ್ತಿ.
ಮೇ 30 ರಂದು ಕುಡಿದ ಮತ್ತಿನಲ್ಲಿ ಪ್ರದೀಪನ ಜೊತೆ ರಕ್ಷಿತ್ ತೆರಳಿದ್ದನು. ಈ ವೇಳೆ ಇಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದೆ. ನಂತರ ಪ್ರದೀಪ್ನನ್ನು ಆತನ ಮನೆಯಲ್ಲಿಯೇ ಚಾಕು ಇರಿದು ಕೊಲೆ ಮಾಡಿ ಬೀಗ ಹಾಕಿ ಪರಾರಿಯಾಗಿದ್ದ. ನಾಲ್ಕು ದಿನಗಳ ಬಳಿಕ ಮನೆಯಲ್ಲಿ ಕೊಳೆತ ಶವದ ವಾಸನೆ ಬರುತ್ತಿದ್ದರಿಂದ ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದರು.
ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದಾಗ ಸೆಕ್ಸ್ ವಿಚಾರಕ್ಕಾಗಿ ಪ್ರದೀಪ್ನನ್ನು ಹತ್ಯೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.