ಮಚ್ಚಿನಿಂದ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಮಹಿಳೆ ಕೊಲೆಗೆ ಯತ್ನ | JANATA NEWS
ಮಂಡ್ಯ : ಮಚ್ಚಿನಿಂದ ಹಲ್ಲೆ ನಡೆಸಿ ಬೆಂಕಿ ಹಚ್ಚಿ ಮಹಿಳೆ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಗೆಳತಿ ಗುಡ್ಡದ ಬಳಿ ನಡೆದಿದೆ.
ಪ್ರಭಾ (40) ಹಲ್ಲೆಗೊಳಗಾಗಿ ಆಸ್ಪತ್ರೆ ದಾಖಲಾಗಿರುವ ಮಹಿಳೆಯಾಗಿದ್ದಾರೆ. ಶೇ.40ರಷ್ಟು ಮಹಿಳೆ ಪ್ರಭಾ(40) ಗಾಯಗೊಂಡಿದ್ದು, ಮಂಡ್ಯ ಮಿಮ್ಸ್ನಲ್ಲಿ ಚಿಕಿತ್ಸೆ ಪಡೆಯಲಾಗುತ್ತಿದೆ. ಬೆಂಗಳೂರಿನ ಗೊಲ್ಲರಹಟ್ಟಿ ನಿವಾಸಿ ಬಸವರಾಜುನಿಂದ ಕೃತ್ಯವೆಸಗಲಾಗಿದೆ.
ಪ್ರಭಾ ಪತಿ ಪಾಪಣ್ಣ 3 ವರ್ಷದ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದು, ಆ ಬಳಿಕ ಗಾರೆ ಕೆಲಸ ಮಾಡುತ್ತಿದ್ದ ಬಸವರಾಜು, ಪ್ರಭಾಗೆ ಪರಿಚಯವಾಗಿದ್ದರಂತೆ. ಇಬ್ಬರ ನಡುವಿನ ಪರಿಚಯ ಅಕ್ರಮ ಸಂಬಂಧಕ್ಕೆ ದಾರಿ ಮಾಡಿತ್ತು ಎನ್ನಲಾಗಿದ್ದು, ಈ ನಡುವೆ ಶುಕ್ರವಾರ ಮಹದೇಶ್ವರ ಬೆಟ್ಟಕ್ಕೆ ಮಹಿಳೆಯನ್ನು ಬಸವರಾಜು ಕರೆದುಕೊಂಡು ಬಂದಿದ್ದನಂತೆ.
ಬಳಿಕ ಮೈಸೂರಿನ ಲಾಡ್ಜ್ನಲ್ಲಿ ಉಳಿದುಕೊಂಡಿದ್ದರು. ನಾಗಮಂಗಲ ಬಳಿಯ ಸೂಳೆ ಕೆರೆ ನೋಡಲು ಹೋಗಿದ್ದರು. ಮಾರ್ಗ ಮಧ್ಯೆ ಗೆಳತಿ ಗುಡ್ಡದ ಬಳಿ ಪ್ರಭಾ ಕೊಲೆಗೆ ಯತ್ನಿಸಿದ್ದು, ಮಚ್ಚಿನಿಂದ ಹಲ್ಲೆ ನಡೆಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೃತ್ಯವೆಸಲಾಗಿದೆ. ಬೆಂಕಿ ಹೊತ್ತಿಕೊಂಡ ಬಳಿಕ ಪ್ರಭಾ ರಸ್ತೆಗೆ ಓಡಿ ಬಂದಿದ್ದು, ಸ್ಥಳೀಯರು ಪ್ರಭಾಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು.
ನಾಗಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.