ಪ್ರತಿಭಟನೆಯಂಥ ಬ್ಲ್ಯಾಕ್ಮೇಲ್ ಪಾಲಿಟಿಕ್ಸ್ ಕೈ ಬಿಟ್ಟು ತನಿಖೆಗೆ ಸಹಕರಿಸಬೇಕು - ಬಿಜೆಪಿ | JANATA NEWS
ನವದೆಹಲಿ : ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ನ್ಯಾಷನಲ್ ಹೆರಾಲ್ಡ್ ಹಗರಣದ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ ಮಾಡಿದ್ದ ಕಾರಣ ಇಂದು ರಾಹುಲ್ ಗಾಂಧಿ ಮೆರವಣಿಗೆಯೊಂದಿಗೆ ವಿಚಾರಣೆಗೆ ಹಾಜರಾದರು.
ಇದರ ಬೇನ್ನಲ್ಲೇ ಕಾಂಗ್ರೆಸ್ ಆಡಳಿತರೂಡ ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿದೆ ಎಂದು ಆರೋಪಿಸಿ ಪ್ರತಿಭಟನೆಗೆ ಮುಂದಾಗಿದೆ.
ಇದಕ್ಕೆ ಇಂದು ಪತ್ರಿಘೋಷ್ಠಿ ನಡೆಸಿದ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ್.ಸಿ.ಏನ್ ಅವರು, "ನ್ಯಾಷನಲ್ ಹೆರಾಲ್ಡ್ ಹಗರಣದ ಆರೋಪಿಗಳಾದ ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರ ವಿರುದ್ಧದ ತನಿಖೆಗೆ ಜಾರಿ ನಿರ್ದೇಶನಾಲಯಕ್ಕೆ 2011ರಲ್ಲೇ ಹಸ್ತಾಂತರಿಸಲಾಗಿದೆ. ಆದರೆ,ಇಂದು ರಾಜಕೀಯ ಪ್ರೇರಿತ ಎಂದು ಪ್ರತಿಭಟಿಸುವ ಮೂಲಕ ತಾವು ಕಾನೂನಿಗಿಂತ ದೊಡ್ಡವರು ಎಂಬ ಸಂದೇಶವನ್ನು ನೀಡಲು ಹೊರಟಿರುವುದು ಖಂಡನೀಯ.
ಪ್ರತಿಭಟನೆಯಂಥ ಬ್ಲ್ಯಾಕ್ಮೇಲ್ ಪಾಲಿಟಿಕ್ಸ್ ಕೈ ಬಿಟ್ಟು ತನಿಖೆಗೆ ಸಹಕರಿಸಬೇಕು. ಸತ್ಯಾಸತ್ಯತೆ ಹೊರಬರುವ ಮೊದಲೇ ಕುಂಬಳ ಕಾಯಿ ಕಳ್ಳನಂತೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿರುವ ಕೈ ನಾಯಕರಲ್ಲಿ ನೈತಿಕತೆ, ಪ್ರಾಮಾಣಿಕತೆಯ ಕೊರತೆ ಎದ್ದು ಕಾಣುತ್ತಿದೆ. ಇಂಥ ಕಾನೂನು ವಿರೋಧಿ ಧೋರಣೆ ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿದೆ", ಎಂದು ಹೇಳಿದ್ದಾರೆ.
ಇಂದು ದೇಶದ ರಾಜಧಾನಿ ಯಲ್ಲಿ ಪಕ್ಷದ ಎಲ್ಲಾ ಸಂಸದರಿಗೆ ಹಾಜರಿರುವಂತೆ ಸೂಚನೆ ನೀಡಲಾಗಿತ್ತು ಎನ್ನಲಾಗಿದ್ದು, ಇಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆಯೊಂದಿಗೆ ಇಡಿ ಕಚೇರಿಗೆ ಆಗಮಿಸಿದ್ದಾರೆ.