11ನೇ ಮಹಡಿಯಿಂದ ಬಿದ್ದು ವೈದ್ಯ ಆತ್ಮಹತ್ಯೆ! | JANATA NEWS
ಬೆಂಗಳೂರು : 11ನೇ ಮಹಡಿಯಿಂದ ಹಾರಿ ವೈದ್ಯ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
31 ವರ್ಷದ ಪೃಥ್ವಿಕಾಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಆಂಧ್ರದ ಕಡಪ ಮೂಲದ ಈತ ಕಳೆದ ಮೂರು ತಿಂಗಳ ಹಿಂದೆ ವಿವಾಹವಾಗಿ ಅಮೃತಹಳ್ಳಿಯಲ್ಲಿ ವಾಸವಾಗಿದ್ದ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾದುತಿದ್ದರು.
ಹೃದಯ ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಪೃಥ್ವಿರಾಜ್ ಮಾನಸಿಕ ಖಿನ್ನತೆಗೂ ಒಳಗಾಗಿದ್ದರು. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಪತ್ನಿ ಮಲಗಿದ್ದಾಗ 11ನೇ ಮಹಡಿ ಮೇಲೆ ಹೋಗಿ ಅಲ್ಲಿಂದ ಬಿದ್ದು ಸಾವನ್ನಪ್ಪಿದ್ದಾನೆ. ಸಾವಿಗೂ ಮುನ್ನ ಮೊಬೈಲ್ ನಲ್ಲಿ ತೆಲುಗಿನಲ್ಲಿ ಡೆತ್ ನೋಟ್ ಬರೆದಿದ್ದಾನೆ ಎಂದು ಹೇಳಲಾಗುತ್ತಿದ್ದು ಈ ಸಂಬಂಧ ಸ್ಥಳಕ್ಕೆ ದೌಡಾಯಿಸಿರುವ ಅಮೃತಹಳ್ಳಿ ಪೊಲೀಸರು ಮೊಬೈಲ್ ಪರಿಶೀಲನೆ ನಡೆಸುತ್ತಿದ್ದಾರೆ.