ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ: ದೂರು ದಾಖಲು | JANATA NEWS
ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರಲ್ಲಿ ಹಲವರಿಗೆ ವಂಚನೆ ನಡೆಸಿರುವ ಕುರಿತು ಶೋಭಾ ಕರಂದ್ಲಾಜೆ ಆಪ್ತ ಸಹಾಯಕ ವರುಣ್ ಆದಿತ್ಯಾ ಎಂಬುವವರು ಸಂಜಯನಗರ ಠಾಣೆಗೆ ದೂರು ನೀಡಿದ್ದಾರೆ.
ಸಚಿವೆಯ ಆಪ್ತ ಎಂದು ಹೇಳಿಕೆಕೊಂಡು ತಮಿಳುನಾಡಿನ ಚೆನ್ನೈ ಹಾಗೂ ಊಟಿಯಲ್ಲಿ ಸಾರ್ವಜನಿಕರಿಂದ ಹಣ ಪಡೆದು ಕಳೆದು ಮೂರು ತಿಂಗಳಿಂದ ಪ್ರಕಾಶ್ ಎಂದು ಹೇಳಿಕೊಂಡಿರುವ ಆರೋಪಿ ಕೃಷಿಕರಿಗೆ ಮತ್ತು ಉದ್ಯಮಿಗಳಿಗೆ ವಂಚನೆ ಮಾಡಿರುವುದಾಗಿ ತಿಳಿದು ಬಂದಿದೆ.
ಪ್ರಕಾಶ್ ಎಂಬಾತ ಶೋಭಾ ಕರಂದ್ಲಾಜೆ ಆಪ್ತ ಅಂತ ಹೇಳಿಕೊಂಡು ಹಣ ಪಡೆದಿದ್ದಾನಂತೆ. ಅಲ್ಲದೇ ಕೇಂದ್ರ ಸರ್ಕಾರದ ಟೆಂಡರ್ಗಳನ್ನು ಕೊಡಿಸುವುದಾಗಿ ಭರವಸೆ ಕೂಡ ಕೆಲವರಿಗೆ ನೀಡಿದ್ದಾನೆ ಎಂದು ಆರೋಪ ಕೇಳಿ ಬಂದಿದೆ.
ತಾನು ಸಚಿವೆಯವರ ಆಪ್ತ ಎಂದು ಕೆಲಸಗಳನ್ನು ಮಾಡಿಸಿಕೊಡುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ ಮಾಡಲಾಗಿದ್ದು, ಸಚಿವೆ ಶೋಭಾ ಅವರಿಗೆ ಕರೆ ಮಾಡಿ ವ್ಯಕ್ತಿಯೊಬ್ಬರು ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಕುರಿತು ಸಚಿವೆ ಶೋಭಾ ಕರದ್ಲಾಂಜೆ ಆಪ್ತ ವರುಣ್ ಆದಿತ್ಯನಿಂದ ಅವರು ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ವಂಚನೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.