Tue,May14,2024
ಕನ್ನಡ / English

ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್ | JANATA NEWS

22 Jun 2022
3697

ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಯನ್ನು ಆಗಸ್ಟ್ 22ರೊಳಗೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಬೇಕು. ಆಗಸ್ಟ್ 23ರಂದು ಅಭಿನಂದನಾ ಸಮಾರಂಭ ನಡೆಸಬೇಕು. ಇಲ್ಲದಿದ್ದರೆ ಸಿಎಂ ಬೊಮ್ಮಾಯಿ ಮನೆ ಮುಂದೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್​​ ಯತ್ನಾಳ್​​ ಬೆಂಗಳೂರಿನಲ್ಲಿ ಮತ್ತೊಂದು ಗಡವು ನೀಡಿದ್ದಾರೆ.

ಸಚಿವ ಸಿ.ಸಿ. ಪಾಟೀಲ್ ಮೂಲಕ ಬುಧವಾರ ನಡೆದ ಸಂಧಾನ ಸಭೆ ಒಂದು ಹಂತಕ್ಕೆ ಯಶಸ್ವಿಯಾಗಿದ್ದು, ಸಿಎಂ ನಿವಾಸದ ಎದುರು ನಡೆಸಲು ತೀರ್ಮಾನಿಸಲಾಗಿದ್ದ ಪ್ರತಿಭಟನೆಯಿಂದ ಪಂಚಮಸಾಲಿ ಸಮಾಜದ ಮುಖಂಡರು ಹಿಂದೆ ಸರಿದಿದ್ದಾರೆ.

ಸಭೆಯ ಬಳಿಕ , ಮಾಜಿ ಕೇಂದ್ರ ಸಚಿವ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಸರ್ಕಾರ ಎರಡು ತಿಂಗಳ ಸಮಯ ಕೇಳಿದೆ. ಎರಡು ತಿಂಗಳೊಳ ಗೆ ಆಗುವುದಿಲ್ಲ ಎಂದರೆ ಮತ್ತೆ ಪ್ರತಿಭಟನೆ ಮಾಡುತ್ತೇವೆ. ಸ್ವಾತಂತ್ರ್ಯ ಒಂದೇ ಸಾರಿ ಬಂತಾ? ಸಾಕಷ್ಟು ಬಾರಿ ಹೋರಾಟ ಮಾಡಿದಾಗಲೇ ಬಂದಿದೆ.ಪ್ರತಿಭಟನೆ ,ಹಾರಾಟ, ಹೋರಾಟ, ಮುಖ ಸವರೋದು, ಮಾಡಬೇಕಾಗುತ್ತದೆ ಎಂದರು.

ಸಾಕಷ್ಟು ವರ್ಷಗಳಿಂದ ಹೋರಾಟ ನಡೆಯುತ್ತಿದೆ .ಒಂದೇ ಬಾರಿಗೆ ಕೊಟ್ಟು ಬಿಡುತ್ತಾರಾ.ಕಾಯುತ್ತೇವೆ..ಕೊಡಲಿಲ್ಲ ಎಂದರೆ ಮತ್ತೊಮ್ಮೆ ಹೋರಾಟ ಮಾಡುತ್ತೇವೆ ಎಂದರು.

ಮೀಸಲಾತಿ ಕುರಿತು ಕೊಂಚ ಕಾನೂನು ತೊಡಕುಗಳು ಇವೆ. ವಿಳಂಬವಾದರೂ ಉತ್ತಮ ಫಲಿತಾಂಶ ಬರುವ ನಂಬಿಕೆ ಇದೆ. ಹೀಗಾಗಿ ಸರ್ಕಾರದ ಭಾಗವಾಗಿ ನಾನು ಹೇಳುತ್ತಿದ್ದೇನೆ, ನಾವು ಎಷ್ಟೇ ಹೋರಾಟ ಮಾಡಿದರೂ ಕೆಲವೊಮ್ಮೆ ನಮಗೆ ಯಾವುದೂ ಕೈಗೆ ಸಿಗುವುದಿಲ್ಲ. ಪ್ರತಿಭಟನೆ ಬೇಡ, ಇನ್ನೆರಡು ತಿಂಗಳಲ್ಲಿ ಸಿಹಿ ಸುದ್ದಿ ಸಿಗುತ್ತದೆ ಎಂದು ಪ್ರತಿಭಟನೆ ಮಾಡದಂತೆ ಸಚಿವ ಸಿ.ಸಿ.ಪಾಟೀಲ್ ಮನವಿ ಮಾಡಿದರು

ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಸರ್ಕಾರ ಭರವಸೆ ಈಡೇರಿಸಿಲ್ಲ.. ಹೀಗಾಗಿ ಸಿಎಂ ನಿವಾಸಕ್ಕೆ ಹೋರಾಟ ಮಾಡಲು ತೀರ್ಮಾನ ಮಾಡಿದ್ದೆವು. ಈಗಾಗಲೇ ಸಾಕಷ್ಟು ಪೂರ್ವಭಾವಿ ಸಭೆ ಕೂಡ ಮಾಡಿದ್ದೇವೆ. ಈಗಾಗಲೇ ಒಂದು ಸುತ್ತಿನ ಸಭೆ ಕೂಡ ಸೇರಿ ಮಾತುಕತೆ ಆಗಿದೆ.

ಆದರೆ ಈಗ ಸಿಎಂ ಬಸವರಾಜ ಬೊಮ್ಮಾಯಿ‌ ಭರವಸೆ ಕೊಟ್ಟಿದ್ದಾರೆ. ಸಿಎಂ ಅವರಿಂದ ಭರವಸೆ ಬರುವ ತನಕವೂ ಹೊರಾಟ ಕೈ ಬಿಡುವುದಿಲ್ಲ ಎಂದಿದ್ದೇವು. ಇದೀಗ ಎರಡು ತಿಂಗಳ ಒಳಗಾಗಿ ಭೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಮುಂದಿನ ಆಗಸ್ಟ್ 22ರಂದು ಮೀಸಲಾತಿ ಕೊಡುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಹೀಗಾಗಿ ಸಿಎಂ ಮನೆ ಮುಂದೆ ಮಾಡುವ ಪ್ರತಿಭಟನೆ ಮುಂದೂಡಲಾಗಿದೆ ಎಂದರು.

RELATED TOPICS:
English summary :Battle of Panchamsali 2A reservation, government deadline for August 22 deadline

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...