Sun,May19,2024
ಕನ್ನಡ / English

ಪಂಚಮಸಾಲಿ 2 ಎ ಮೀಸಲಾತಿ ಹೋರಾಟ, ಸರಕಾರಕ್ಕೆ ಅಗಸ್ಟ್ 22 ಡೆಡ್ ಲೈನ್: ಬಸವನಗೌಡ ಪಾಟೀಲ್​​ ಯತ್ನಾಳ್ | JANATA NEWS

22 Jun 2022
3701

ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಯನ್ನು ಆಗಸ್ಟ್ 22ರೊಳಗೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಬೇಕು. ಆಗಸ್ಟ್ 23ರಂದು ಅಭಿನಂದನಾ ಸಮಾರಂಭ ನಡೆಸಬೇಕು. ಇಲ್ಲದಿದ್ದರೆ ಸಿಎಂ ಬೊಮ್ಮಾಯಿ ಮನೆ ಮುಂದೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್​​ ಯತ್ನಾಳ್​​ ಬೆಂಗಳೂರಿನಲ್ಲಿ ಮತ್ತೊಂದು ಗಡವು ನೀಡಿದ್ದಾರೆ.

ಸಚಿವ ಸಿ.ಸಿ. ಪಾಟೀಲ್ ಮೂಲಕ ಬುಧವಾರ ನಡೆದ ಸಂಧಾನ ಸಭೆ ಒಂದು ಹಂತಕ್ಕೆ ಯಶಸ್ವಿಯಾಗಿದ್ದು, ಸಿಎಂ ನಿವಾಸದ ಎದುರು ನಡೆಸಲು ತೀರ್ಮಾನಿಸಲಾಗಿದ್ದ ಪ್ರತಿಭಟನೆಯಿಂದ ಪಂಚಮಸಾಲಿ ಸಮಾಜದ ಮುಖಂಡರು ಹಿಂದೆ ಸರಿದಿದ್ದಾರೆ.

ಸಭೆಯ ಬಳಿಕ , ಮಾಜಿ ಕೇಂದ್ರ ಸಚಿವ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಸರ್ಕಾರ ಎರಡು ತಿಂಗಳ ಸಮಯ ಕೇಳಿದೆ. ಎರಡು ತಿಂಗಳೊಳ ಗೆ ಆಗುವುದಿಲ್ಲ ಎಂದರೆ ಮತ್ತೆ ಪ್ರತಿಭಟನೆ ಮಾಡುತ್ತೇವೆ. ಸ್ವಾತಂತ್ರ್ಯ ಒಂದೇ ಸಾರಿ ಬಂತಾ? ಸಾಕಷ್ಟು ಬಾರಿ ಹೋರಾಟ ಮಾಡಿದಾಗಲೇ ಬಂದಿದೆ.ಪ್ರತಿಭಟನೆ ,ಹಾರಾಟ, ಹೋರಾಟ, ಮುಖ ಸವರೋದು, ಮಾಡಬೇಕಾಗುತ್ತದೆ ಎಂದರು.

ಸಾಕಷ್ಟು ವರ್ಷಗಳಿಂದ ಹೋರಾಟ ನಡೆಯುತ್ತಿದೆ .ಒಂದೇ ಬಾರಿಗೆ ಕೊಟ್ಟು ಬಿಡುತ್ತಾರಾ.ಕಾಯುತ್ತೇವೆ..ಕೊಡಲಿಲ್ಲ ಎಂದರೆ ಮತ್ತೊಮ್ಮೆ ಹೋರಾಟ ಮಾಡುತ್ತೇವೆ ಎಂದರು.

ಮೀಸಲಾತಿ ಕುರಿತು ಕೊಂಚ ಕಾನೂನು ತೊಡಕುಗಳು ಇವೆ. ವಿಳಂಬವಾದರೂ ಉತ್ತಮ ಫಲಿತಾಂಶ ಬರುವ ನಂಬಿಕೆ ಇದೆ. ಹೀಗಾಗಿ ಸರ್ಕಾರದ ಭಾಗವಾಗಿ ನಾನು ಹೇಳುತ್ತಿದ್ದೇನೆ, ನಾವು ಎಷ್ಟೇ ಹೋರಾಟ ಮಾಡಿದರೂ ಕೆಲವೊಮ್ಮೆ ನಮಗೆ ಯಾವುದೂ ಕೈಗೆ ಸಿಗುವುದಿಲ್ಲ. ಪ್ರತಿಭಟನೆ ಬೇಡ, ಇನ್ನೆರಡು ತಿಂಗಳಲ್ಲಿ ಸಿಹಿ ಸುದ್ದಿ ಸಿಗುತ್ತದೆ ಎಂದು ಪ್ರತಿಭಟನೆ ಮಾಡದಂತೆ ಸಚಿವ ಸಿ.ಸಿ.ಪಾಟೀಲ್ ಮನವಿ ಮಾಡಿದರು

ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಸರ್ಕಾರ ಭರವಸೆ ಈಡೇರಿಸಿಲ್ಲ.. ಹೀಗಾಗಿ ಸಿಎಂ ನಿವಾಸಕ್ಕೆ ಹೋರಾಟ ಮಾಡಲು ತೀರ್ಮಾನ ಮಾಡಿದ್ದೆವು. ಈಗಾಗಲೇ ಸಾಕಷ್ಟು ಪೂರ್ವಭಾವಿ ಸಭೆ ಕೂಡ ಮಾಡಿದ್ದೇವೆ. ಈಗಾಗಲೇ ಒಂದು ಸುತ್ತಿನ ಸಭೆ ಕೂಡ ಸೇರಿ ಮಾತುಕತೆ ಆಗಿದೆ.

ಆದರೆ ಈಗ ಸಿಎಂ ಬಸವರಾಜ ಬೊಮ್ಮಾಯಿ‌ ಭರವಸೆ ಕೊಟ್ಟಿದ್ದಾರೆ. ಸಿಎಂ ಅವರಿಂದ ಭರವಸೆ ಬರುವ ತನಕವೂ ಹೊರಾಟ ಕೈ ಬಿಡುವುದಿಲ್ಲ ಎಂದಿದ್ದೇವು. ಇದೀಗ ಎರಡು ತಿಂಗಳ ಒಳಗಾಗಿ ಭೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಮುಂದಿನ ಆಗಸ್ಟ್ 22ರಂದು ಮೀಸಲಾತಿ ಕೊಡುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಹೀಗಾಗಿ ಸಿಎಂ ಮನೆ ಮುಂದೆ ಮಾಡುವ ಪ್ರತಿಭಟನೆ ಮುಂದೂಡಲಾಗಿದೆ ಎಂದರು.

RELATED TOPICS:
English summary :Battle of Panchamsali 2A reservation, government deadline for August 22 deadline

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...