Wed,May15,2024
ಕನ್ನಡ / English

ಕೆಂಪೇಗೌಡರ ಅಧ್ಯಾಯವಿದ್ದ ಪಠ್ಯದ ಪ್ರತಿಯನ್ನು ಡಿ.ಕೆ.ಶಿವಕುಮಾರ್ ಹರಿದಿದ್ದು ತಪ್ಪು - ಸಚಿವ ಆರ್.ಅಶೋಕ್ | JANATA NEWS

23 Jun 2022
2897

ಬೆಂಗಳೂರು : ಕೆಂಪೇಗೌಡರ ಅಧ್ಯಾಯವಿದ್ದ ಪರಿಷ್ಕೃತ ಪಠ್ಯದ ಪ್ರತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿದು ಹಾಕಿದ್ದು ತಪ್ಪು, ಎಂದು ಕಂದಾಯ ಸಚಿವ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದರು.

ಅವರು ವಿಧಾನಸೌಧದಲ್ಲಿ ಇಂದು ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಫ್ರೀಡಂ ಪಾರ್ಕನಲ್ಲಿ ಪಠ್ಯ ಪರಿಷ್ಕರಣೆ ವಿರೋಧಿಸಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಪರಿಷ್ಕೃತಗೊಂಡ ಪಠ್ಯದ ಪ್ರತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿದು ಹಾಕಬಾರದಿತ್ತು. ಅದರಲ್ಲಿ ಕೆಂಪೇಗೌಡರ ಅಧ್ಯಾಯವಿತ್ತು. ಅದನ್ನು ಹರಿದು ಹಾಕಿದ್ದು ಎಷ್ಟು ಸರಿ, ಎಂದು ಪ್ರಶ್ನಿಸಿದರು.

ಅದರ ಬದಲು ಅವರು ಹಿಂದೆ ಮಾಡಿದ್ದ ಪಠ್ಯಪುಸ್ತಕ ಬಗರೂರು ರಾಮಚಂದ್ರಪ್ಪ ಅವರು ಮಾಡಿದ್ದ ಪಠ್ಯಪುಸ್ತಕವನ್ನು ಹರಿದ ಹಾಕಬೇಕಾಗಿತ್ತು. ಅದರಲ್ಲಿ ಕೆಂಪೇಗೌಡರ ಬಗ್ಗೆ ಇತಿಹಾಸ ಇರಲಿಲ್ಲ, ಅವರ ಚಿತ್ರ ಕೂಡ ಇರಲಿಲ್ಲ. ಈಗ ಪರಿಷ್ಕರಿಸಲ್ಪಟ್ಟ ಪಠ್ಯದಲ್ಲಿ ಕೆಂಪೇಗೌಡರ ಇತಿಹಾಸ ಇದೆ ಇದನ್ನು ಹರಿದು ಹಾಕಿದ್ದು ಎಷ್ಟು ಸರಿ ಎಂದು ನಾನು ಪ್ರಶ್ನೆಯನ್ನು ಮಾಡುತ್ತಿದ್ದೇನೆ, ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರದ ಕಾಲದ ಪಠ್ಯಪುಸ್ತಕದ ಬಗ್ಗೆ ಸಚಿವ ಅಶೋಕ್ ಅವರು ಮಾತಾಡುತ್ತ, ಇವರಿಗೆ ಹಿಂದೂ ಇರಬಾರದು, ಹಿಂದೂ ಸಮುದ್ರ ಇರಬಾರದು, ಹಿಂದೂ ಪದ ಇರಬಾರದು, ಹಿಂದೂ ದೇವರ ಹೆಸರು ಇರಬಾರದು, ಸ್ವತಂತ್ರ ಹೋರಾಟಗಾರರ ಹೆಸರು ಇರಬಾರದು. ಗಜನಿ ಮೊಹಮ್ಮದ್, ಔರಂಗಜೇಬ್, ಖಿಲ್ಜಿ, ಟಿಪ್ಪು ಹೈದರಾಲಿ ಇವರ ಬಗ್ಗೆ ಮಕ್ಕಳಿಗೆ ಜಾಸ್ತಿ ತಿಳಿಯಬೇಕು. ಇದನ್ನು ನಿರಂತರವಾಗಿ ಸಿದ್ದರಾಮಯ್ಯನವರ ಸರ್ಕಾರ ಮಾಡಿದೆ. ಇದನ್ನೆಲ್ಲ ನಾವು ತೆಗೆದುಹಾಕಿದ್ದೇವೆ. ಭಾರತೀಯ ಪರಂಪರೆ, ಭಾರತೀಯ ಸಂಸ್ಕೃತಿ ನೆಲದ ಸಂಸ್ಕೃತಿಯನ್ನು ಬಿಂಬಿಸುವಂತಹ ಒಂದು ಪಠ್ಯಪುಸ್ತಕವನ್ನು ನಾವು ಕೊಟ್ಟಿದ್ದೇವೆ, ಎಂದು ಸಚಿವ ಅಶೋಕ್ ಅವರು ಪಠ್ಯಪುಸ್ತಕ ಪರಿಷ್ಕರಣೆಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

RELATED TOPICS:
English summary :DK.Shivakumar torning text copy which had Kempegowda chapter is wrong - Min.Ashok

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...