Sat,Jun20,2026
ಕನ್ನಡ / English

ಬುದ್ದಿ ಹೇಳಲು ಬಂದ ಪತ್ನಿಯ ಪೋಷಕರಿಗೆ ಬೆಂಕಿ ಹಚ್ಚಿದ ಪತಿ, ಒಬ್ಬ ಸಜೀವ ದಹನ, ಮೂವರು ಗಂಭೀರ | JANATA NEWS

29 Jun 2022

ಯಾದಗಿರಿ : ವ್ಯಕ್ತಿಯೋರ್ವ ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಓರ್ವ ಸಾವನ್ನಪ್ಪಿದು ಮೂವರು ಗಂಭೀರ ಗಾಯಗೊಂಡಿರುವ ಅಮಾನುಷ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ನಾಗಪ್ಪ ಹಗರಗುಂಡ (35) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕೃತ್ಯ ಎಸಗಿದ ಆರೋಪಿ ಶರಣಪ್ಪ ಹಗರಗುಂಡ ಎಂಬ ವ್ಯಕ್ತಿ ಯಾಗಿದ್ದಾನೆ. ಘಟನೆಯಲ್ಲಿ ಸುಟ್ಟು ಗಾಯಾಳುಗಳಾದ ಶರಣಪ್ಪ ಪತ್ನಿ ಹುಲಿಗೆಮ್ಮಳ ತಂದೆ ಸಿದ್ದರಾಮಪ್ಪ ಮುರಾಳ (62), ಮುತ್ತಪ್ಪ ಮುರಾಳ, ನಾಗಪ್ಪ ಶರಣಪ್ಪ ಸರೂರ ಎಂದು ತಿಳಿದು ಬಂದಿದೆ.

ಕೆಲ ದಿನಗಳಿಂದ ಪತಿ ಶರಣಪ್ಪ ಮತ್ತು ಪತ್ನಿ ಹುಲಿಗಮ್ಮ ನಡುವೆ ಜಗಳವಾಗಿತ್ತು. ಈ ಸಂಬಂಧ ಶರಣಪ್ಪನಿಗೆ ಬುದ್ಧಿ ಹೇಳಲು ಪತ್ನಿ ಹುಲಿಗೆಮ್ಮಳ ತಂದೆ ಹಾಗೂ ಮೂವರು ಸಂಬಂಧಿಕರು ಬಂದಿದ್ದರು. ಈ ವೇಳೆ ಶರಣಪ್ಪ ನಾಲ್ಕು ಜನರನ್ನು ಕೋಣೆಯಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹುಲಿಗಮ್ಮ ರಾಯಚೂರು ಜಿಲ್ಲೆಯ ಲಿಂಗಸೂರಿನ ಕೆಎಸ್ಆರ್ಟಿಸಿ ಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಳು. ಹುಲಿಗೆಮ್ಮ ಕಳೆದ 14 ತಿಂಗಳಿನಿಂದ ಬೇರೆ ಕಡೆ ಮನೆ ಮಾಡಿಕೊಂಡಿದ್ದಳು. ಶರಣಪ್ಪ ಹೆಂಡತಿ ಹುಲಿಗೆಮ್ಮಗೆ ವಿಚ್ಚೇದನ ಕೇಳಿದ್ದನು. ಆದರೆ ಹುಲಿಗೆಮ್ಮ ವಿಚ್ಚೇದನ ನೀಡಲು ನಿರಾಕರಿಸಿದ್ದಳು. ಹುಲಿಗೆಮ್ಮ ಪತಿಯೊಂದಿಗೆ ಮಾತನಾಡಲು ಹುಲಿಗಮ್ಮ ತಂದೆ ಹಾಗೂ ಸಂಬಂಧಿಕರು ಇಂದು ಬೆಳಗ್ಗೆ ಶರಣಪ್ಪನ ಮನೆ ನಾರಾಯಣಪುರಕ್ಕೆ ಬಂದಿದ್ದರು. ಆದರೆ ಹುಲಿಗೆಮ್ಮ ನಾರಾಯಣಪುರಕ್ಕೆ ನಾನು ಬರಲ್ಲ ನೀವೆ ಮಾತಾಡಿ ಎಂದು, ಕೆಲಸಕ್ಕೆ ಹೋಗಿದ್ದಳು. ಜೊತೆಗೆ ಪೋಷಕರಿಗೂ ಸಹ ಮಾತಾಡಲು ಹೋಗಬೇಡಿ ಎಂದಿದ್ದಳು.

ಕೌಟುಂಬಿಕ ಸಮಸ್ಯೆ ಬಗ್ಗೆ ನ್ಯಾಯ ಪಂಚಾಯತಿ ನಡೆಸಲು ಪತ್ನಿಯ ತಂದೆ ಸಿದ್ದರಾಮಪ್ಪ ಮುರಾಳ, ಮುತ್ತಪ್ಪ ಮುರಾಳ, ನಾಗಪ್ಪ ಹಗರಗುಂಡ, ಶರಣಪ್ಪ ಸರೂರ ಎಂಬುವವರು ಬುಧವಾರ ಬೆಳಿಗ್ಗೆ ನಾರಾಯಣಪುರಕ್ಕೆ ಆಗಮಿಸಿದ್ದರು, ಇದೇ ವೇಳೆ ಮನೆಯ ಮಹಡಿ ಕೊಠಡಿಯಲ್ಲಿ ನಾಲ್ಕು ಜನರೊಂದಿಗೆ ಮಾತುಕತೆ ನಡೆಸಿದ್ದ ಆರೋಪಿ ಶರಣಪ್ಪ ಮಧ್ಯದಲ್ಲಿ ಹಿರಿಯರನ್ನು ಕರೆದುಕೊಂಡು ಬರುವುದಾಗಿ ಹೇಳಿ ಕೊಠಡಿಯಲ್ಲಿ ನಾಲ್ವರನ್ನು ಕೂಡಿ ಹಾಕಿ ಬೀಗ ಜಡೆದು ಕಿಟಕಿ ಮೂಲಕ ಅವರ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ

RELATED TOPICS:
English summary :The husband who set fire to his wife s parents who came to mind, one of them burnt alive, three serious

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...