Tue,Aug04,2026
ಕನ್ನಡ / English

ಬುದ್ದಿ ಹೇಳಲು ಬಂದ ಪತ್ನಿಯ ಪೋಷಕರಿಗೆ ಬೆಂಕಿ ಹಚ್ಚಿದ ಪತಿ, ಒಬ್ಬ ಸಜೀವ ದಹನ, ಮೂವರು ಗಂಭೀರ | JANATA NEWS

29 Jun 2022

ಯಾದಗಿರಿ : ವ್ಯಕ್ತಿಯೋರ್ವ ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಓರ್ವ ಸಾವನ್ನಪ್ಪಿದು ಮೂವರು ಗಂಭೀರ ಗಾಯಗೊಂಡಿರುವ ಅಮಾನುಷ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ನಾಗಪ್ಪ ಹಗರಗುಂಡ (35) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕೃತ್ಯ ಎಸಗಿದ ಆರೋಪಿ ಶರಣಪ್ಪ ಹಗರಗುಂಡ ಎಂಬ ವ್ಯಕ್ತಿ ಯಾಗಿದ್ದಾನೆ. ಘಟನೆಯಲ್ಲಿ ಸುಟ್ಟು ಗಾಯಾಳುಗಳಾದ ಶರಣಪ್ಪ ಪತ್ನಿ ಹುಲಿಗೆಮ್ಮಳ ತಂದೆ ಸಿದ್ದರಾಮಪ್ಪ ಮುರಾಳ (62), ಮುತ್ತಪ್ಪ ಮುರಾಳ, ನಾಗಪ್ಪ ಶರಣಪ್ಪ ಸರೂರ ಎಂದು ತಿಳಿದು ಬಂದಿದೆ.

ಕೆಲ ದಿನಗಳಿಂದ ಪತಿ ಶರಣಪ್ಪ ಮತ್ತು ಪತ್ನಿ ಹುಲಿಗಮ್ಮ ನಡುವೆ ಜಗಳವಾಗಿತ್ತು. ಈ ಸಂಬಂಧ ಶರಣಪ್ಪನಿಗೆ ಬುದ್ಧಿ ಹೇಳಲು ಪತ್ನಿ ಹುಲಿಗೆಮ್ಮಳ ತಂದೆ ಹಾಗೂ ಮೂವರು ಸಂಬಂಧಿಕರು ಬಂದಿದ್ದರು. ಈ ವೇಳೆ ಶರಣಪ್ಪ ನಾಲ್ಕು ಜನರನ್ನು ಕೋಣೆಯಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹುಲಿಗಮ್ಮ ರಾಯಚೂರು ಜಿಲ್ಲೆಯ ಲಿಂಗಸೂರಿನ ಕೆಎಸ್ಆರ್ಟಿಸಿ ಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಳು. ಹುಲಿಗೆಮ್ಮ ಕಳೆದ 14 ತಿಂಗಳಿನಿಂದ ಬೇರೆ ಕಡೆ ಮನೆ ಮಾಡಿಕೊಂಡಿದ್ದಳು. ಶರಣಪ್ಪ ಹೆಂಡತಿ ಹುಲಿಗೆಮ್ಮಗೆ ವಿಚ್ಚೇದನ ಕೇಳಿದ್ದನು. ಆದರೆ ಹುಲಿಗೆಮ್ಮ ವಿಚ್ಚೇದನ ನೀಡಲು ನಿರಾಕರಿಸಿದ್ದಳು. ಹುಲಿಗೆಮ್ಮ ಪತಿಯೊಂದಿಗೆ ಮಾತನಾಡಲು ಹುಲಿಗಮ್ಮ ತಂದೆ ಹಾಗೂ ಸಂಬಂಧಿಕರು ಇಂದು ಬೆಳಗ್ಗೆ ಶರಣಪ್ಪನ ಮನೆ ನಾರಾಯಣಪುರಕ್ಕೆ ಬಂದಿದ್ದರು. ಆದರೆ ಹುಲಿಗೆಮ್ಮ ನಾರಾಯಣಪುರಕ್ಕೆ ನಾನು ಬರಲ್ಲ ನೀವೆ ಮಾತಾಡಿ ಎಂದು, ಕೆಲಸಕ್ಕೆ ಹೋಗಿದ್ದಳು. ಜೊತೆಗೆ ಪೋಷಕರಿಗೂ ಸಹ ಮಾತಾಡಲು ಹೋಗಬೇಡಿ ಎಂದಿದ್ದಳು.

ಕೌಟುಂಬಿಕ ಸಮಸ್ಯೆ ಬಗ್ಗೆ ನ್ಯಾಯ ಪಂಚಾಯತಿ ನಡೆಸಲು ಪತ್ನಿಯ ತಂದೆ ಸಿದ್ದರಾಮಪ್ಪ ಮುರಾಳ, ಮುತ್ತಪ್ಪ ಮುರಾಳ, ನಾಗಪ್ಪ ಹಗರಗುಂಡ, ಶರಣಪ್ಪ ಸರೂರ ಎಂಬುವವರು ಬುಧವಾರ ಬೆಳಿಗ್ಗೆ ನಾರಾಯಣಪುರಕ್ಕೆ ಆಗಮಿಸಿದ್ದರು, ಇದೇ ವೇಳೆ ಮನೆಯ ಮಹಡಿ ಕೊಠಡಿಯಲ್ಲಿ ನಾಲ್ಕು ಜನರೊಂದಿಗೆ ಮಾತುಕತೆ ನಡೆಸಿದ್ದ ಆರೋಪಿ ಶರಣಪ್ಪ ಮಧ್ಯದಲ್ಲಿ ಹಿರಿಯರನ್ನು ಕರೆದುಕೊಂಡು ಬರುವುದಾಗಿ ಹೇಳಿ ಕೊಠಡಿಯಲ್ಲಿ ನಾಲ್ವರನ್ನು ಕೂಡಿ ಹಾಕಿ ಬೀಗ ಜಡೆದು ಕಿಟಕಿ ಮೂಲಕ ಅವರ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ

RELATED TOPICS:
English summary :The husband who set fire to his wife s parents who came to mind, one of them burnt alive, three serious

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...