ಶಾಲೆ ಶುರುವಾಗಿದೆ, ಕೂಡಲೇ ಸಮವಸ್ತ್ರ, ಶೂ ವಿತರಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ | JANATA NEWS
ಬೆಂಗಳೂರು : ರಾಜ್ಯ ಸರ್ಕಾರ ಕೂಡಲೇ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಶೂ ವಿತರಣೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಶಾಲೆಗಳು ಶುರುವಾಗಿವೆ. ಈಗಾಗಲೇ ಶೂ, ಸಮವಸ್ತ್ರ ಕೊಡಬೇಕಿತ್ತು. ಆದರೆ ಇನ್ನೂ ಯಾವುದನ್ನೂ ಕೊಟ್ಟಿಲ್ಲ. ಕೂಡಲೇ ಮಕ್ಕಳಿಗೆ ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.
ನಮ್ಮ ಸರ್ಕಾರದ ಅವಧಿಯಲ್ಲಿ ಶಾಲಾ ಮಕ್ಕಳಿಗೆ ಶೂ- ಸಾಕ್ಸ್ ನೀಡುತ್ತಿದ್ದೆವು. ಬಡ ಮಕ್ಕಳಿಗೆ ಅನುಕೂಲವಾಗಲಿ, ಸಮಾನ ಮನೋಭಾವವಿರಲಿ ಎಂದು ಕೊಡುತ್ತಿದ್ದೆವು. ಬಿಜೆಪಿ ಸರ್ಕಾರ ಅದನ್ನು ನಿಲ್ಲಿಸಲು ಹೊರಟಿತ್ತು. ಈಗ ನಾವು ಒತ್ತಾಯ ಮಾಡಿದ ಮೇಲೆ ಕೊಡುತ್ತೇವೆ ಎಂದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
RELATED TOPICS:
English summary :School has started, distribute uniforms, shoes immediately: Siddaramaiah urges government