ಕಸ್ತೂರಿರಂಗನ್ ವರದಿ ಅವೈಜ್ಞಾನಿಕ : ಜನಾಭಿಪ್ರಾಯ ವರದಿ ಕೇಂದ್ರಕ್ಕೆ ಸಲ್ಲಿಸಲು ರವೀಂದ್ರ ನಾಯ್ಕ ಒತ್ತಾಯ | JANATA NEWS
ಕಾರವಾರ : ಇತ್ತೀಚಿನ ಕಸ್ತೂರಿರಂಗನ ವರದಿ ಕರಡು ಅಧಿಸೂಚನೆಯಂತೆ ಪರಿಸರ ಅತೀ ಸೂಕ್ಷ್ಮ ಪ್ರದೇಶ ನಿಗದಿಗೊಳಿಸುವ ಅಂಶವು ಜನಜೀವನದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದರಿಂದ, ವರದಿ ಅನುಷ್ಟಾನದ ಪೂರ್ವದಲ್ಲಿ ಘೋಷಿಸಿದ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಗ್ರಾಮ ಮಟ್ಟದ ಜನಾಭಿಪ್ರಾಯ ಸಂಗ್ರಹದ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಬೇಕೆಂದು ಮುಖ್ಯಮಂತ್ರಿಗಳಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ಅಗ್ರಹಿಸಿದ್ದಾರೆ.
ಕಸ್ತೂರಿ ರಂಗನ್ ವರದಿಯು ಅವೈಜ್ಞಾನಿಕವಾಗಿದ್ದು, ಸೆಟಲೈಟ್ ಚಿತ್ರಣದ ಮೂಲಕ ತಯಾರಿಸಿದ ವರದಿಯು ವಾಸ್ತವಿಕ ಮತ್ತು ನೈಜತೆಯ ಚಿತ್ರಣಕ್ಕೆ ವ್ಯತಿರಿಕ್ತವಾಗಿದೆ. ಅಲ್ಲದೇ ಗ್ರಾಮದ ಶೇ. ೨೦ ಕ್ಕಿಂತ ಹೇಚ್ಚು ಭೌಗೋಳಿಕ ಪ್ರದೇಶ ಜೀವಿವೈವಿಧ್ಯ ಪರಿಸರ
ಸೂಕ್ಷ್ಮವಾಗಿರುವ ಮಾನದಂಡದ ಅಡಿಯಲ್ಲಿ ಸೂಕ್ಷ್ಮ ಪ್ರದೇಶವೆಂದು ಗುರುತಿಸಿರುವುದು ಅವೈಜ್ಞಾನಿಕ, ಎಂದು ರವೀಂದ್ರ ನಾಯ್ಕ ಹೇಳಿದರು.
ಗುಜರಾತ, ಕರ್ನಾಟಕ, ಮಹಾರಾಷ್ಟç, ಗೋವಾ, ಕೇರಳ ಮತ್ತು ತಮಿಳುನಾಡು ರಾಜ್ಯ ಒಳಗೊಂಡ ಸುಮಾರು ೫೯,೯೪೦ ಚ.ಕೀ.ಮೀ ಪ್ರದೇಶವನ್ನ ಡಾ. ಕಸ್ತೂರಿ ರಂಗನ್ ವರದಿಯಲ್ಲಿ ಪರಿಸರ ಅತೀ ಸೂಕ್ಷö್ಮ ಪ್ರದೇಶವೆಂದು ಘೋಷಿಸಿತು. ಕರ್ನಾಟಕದಲ್ಲಿ ೨೦,೬೬೮ ಚ.ಕೀ.ಮೀ ಪ್ರದೇಶವು ೧,೫೭೬ ಹಳ್ಳಿಗಳಿಗೆ ವಿಸ್ತರಿಸಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿದೆ ಎಂದರು.
ಹೇಚ್ಚಿನ ಕಾನೂನು ಅವಶ್ಯವಿಲ್ಲ :
ಪಶ್ಚಿಮ ಘಟ್ಟ ಪ್ರದೇಶವನ್ನು ರಕ್ಷಣೆ ಹಾಗೂ ಸಂರಕ್ಷಿಸಲು ಈಗಾಗಲೇ ಸಾಕಷ್ಟು ಕಾನೂನು ನೀತಿ, ನಿಯಮ ಅಳವಡಿಸಲಾಗಿದ್ದು, ವಿನಾಕಾರಣ ಹೇಚ್ಚಿನ ಕಾನೂನಿನ ಬಲ ಪ್ರಯೋಗದ ಮೂಲಕ ನಿಯಂತ್ರಿಸಲು ಪ್ರಯತ್ನಿಸದಿದ್ದಲ್ಲಿ ಜನಸಾಮಾನ್ಯರ ನೈಜ್ಯ ಜೀವನಕ್ಕೆ ಮಾರಕವಾಗುವುದೆಂದು ಅವರು ಹೇಳಿದರ
ಕಸ್ತೂರಿ ರಂಗನ ವರದಿಯಂತೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಸೂಕ್ಷö್ಮ ಪ್ರದೇಶವೆಂದು ಗುರುತಿಸಿದ ಹಳ್ಳಿಗಳ ಸಂಖ್ಯೆ.
ಕ್ರ.ಸA ಜಿಲ್ಲೆ ಒಟ್ಟು ಹಳ್ಳಿ
೧ ಬೆಳಗಾವಿ ೨೮
೨ ಚಾಮರಾಜನಗರ ೨೧
೩ ಚಿಕ್ಕಮಗಳೂರು ೧೪೨
೪ ಕೊಗನ ೫೪
೫ ಹಾಸನ ೩೫
೬ ಕಾರವಾರ ೭೦೪
೭ ಮಂಗಳೂರು ೪೬
೮ ಮೈಸೂರ ೫೬
೯ ಶಿವಮೊಗ್ಗ ೪೭೪
೧೦ ಉಡುಪಿ ೩೭
ಒಟ್ಟು ೧೫೯೭