Tue,Sep26,2023
ಕನ್ನಡ / English

ಕೇಂದ್ರ ಸರ್ಕಾರ ಬಡ, ಮಧ್ಯಮ ವರ್ಗದವರ ರಕ್ತ ಹೀರುತ್ತಿದೆ, ರಾಜ್ಯ ಸರ್ಕಾರಗಳು ಸಾಥ್ ನೀಡುತ್ತಿವೆ | JANATA NEWS

18 Jul 2022
2022

ಬೆಂಗಳೂರು : ಬಡವರು, ಮಧ್ಯಮವರ್ಗದವರ ರಕ್ತಹೀರುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದ್ದು,‌ ರಾಜ್ಯ ಸರ್ಕಾರಗಳು ಸಾಥ್ ನೀಡುತ್ತಿವೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕನಿಷ್ಠ 8 ಲಕ್ಷ ಕೋಟಿ ರೂ. ಮೊತ್ತ ನಮಗೆ ಬರಬೇಕು. ಶೇ.42 ರಷ್ಟು ನಿಯಮ ಬದ್ಧ ಅನುದಾನ ಬರಬೇಕಿತ್ತು, ಆದರೆ ಬಂದಿಲ್ಲ. ಬದಲಾಗಿ ಅಗತ್ಯ ವಸ್ತುಗಳ ಬೆಲೆ ಯದ್ವಾತದ್ವಾ ಏರಿಕೆ ಆಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಜಿಎಸ್ ಟಿ ವ್ಯಾಪ್ತಿಗೆ ಹೊಸದಾಗಿ ಮೊಸರು, ಮಜ್ಜಿಗೆ, ಲಸ್ಸಿ, ಪನ್ನೀರ್ ಗೆ ಶೇಕಡ ಐದರಷ್ಟು ಬ್ಯಾಂಕ್ ಚೆಕ್ ಗೆ ಶೇ.18ರಷ್ಟು ಜಿಎಸ್ ಟಿ‌ ವಿಧಿಸಿದ್ದಾರೆ. ಮೊಸರು, ಮಜ್ಜಿಗೆ, ಲಸ್ಸಿ, ಪನ್ನೀರ್​​ ಮೇಲೆ ಉಚಿತ ತೆರಿಗೆ ಶೇ.5ರಷ್ಟು ಹೆಚ್ಚಾಗಿದೆ. ಅಕ್ಕಿ, ಬಾರ್ಲಿ, ಬೆಲ್ಲ, ಜೇನುತುಪ್ಪ ಮೇಲೆ ತೆರಿಗೆ ಹೆಚ್ಚಿಸಲಾಗಿದೆ. ಬಡವರು, ರೈತರು ಮಧ್ಯಮವರ್ಗದವರು, ವಿದ್ಯಾರ್ಥಿಗಳಿಗೆ ಭಾರ ಹೊರಿಸಿದ್ದಾರೆ ಎಂದು ಆರೋಪಿಸಿದರು.

ಶ್ರೀಮಂತರಿಗೆ ತೆರಿಗೆಯನ್ನು ಶೇ 30 ರಿಂದ 22ಕ್ಕೆ ಇಳಿಸಲಾಗಿದೆ. ಇದು ಮೋದಿ ಸರ್ಕಾರದ ಅಚ್ಛೇ ದಿನ್ ಪರಿಣಾಮ. ಬಡವರು, ಮಧ್ಯಮ ವರ್ಗದವರು ಬಳಸುವ ವಸ್ತುವನ್ನೇ ಗುರುತಿಸಿ ಜಿಎಸ್​ಟಿ ಹೆಚ್ಚಿಸಲಾಗಿದೆ. ಆದಾಯ ಕುಸಿತ, ನಿರುದ್ಯೋಗ ಹೆಚ್ಚಳ, ರೈತರು, ದುಡಿಯುವ ಜನರ ಆದಾಯ ಕಡಿಮೆಯಾಗಿದೆ ಎಂದರು.

ಬಡವರ, ಮಧ್ಯಮ ವರ್ಗದವರ ರಕ್ತ ಹೀರುವ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡಿದೆ. ರಾಜ್ಯ ಸರ್ಕಾರಗಳು ಇದಕ್ಕೆ ಸಹಕಾರ ನೀಡುತ್ತಿವೆ. ರೈತರಿಗೆ ಗೊಬ್ಬರ ಕೊಡುವ ಶಕ್ತಿ ಸರ್ಕಾರಕ್ಕೆ ಇಲ್ಲವಾಗಿದೆ. ಇದು ಮೋದಿ 8 ವರ್ಷ, ಬೊಮ್ಮಾಯಿ 1 ವರ್ಷದ ಸಾಧನೆಯಾಗಿದೆ ಎಂದರು

RELATED TOPICS:
English summary :The central government is sucking the blood of the poor and middle class, while the state governments are supporting it

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...