ಪ್ರವೀಣ್ ಹತ್ಯೆ ಪ್ರಕರಣ: ಕೇರಳದಲ್ಲೂ ಆರೋಪಿಗಳಿಗಾಗಿ ಹುಡುಕಾಟ, 10 ಆರೋಪಿಗಳ ಬಂಧನ | JANATA NEWS
ಬೆಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವಾರಜ ಬೊಮ್ಮಾಯಿ, ಸಿಟಿ ರವಿ ಜೊತೆಗೆ ಸಭೆ ನಡೆಸಿ ಮಾತನಾಡಿದ ಅವರು, ಪ್ರವೀಣ್ ಹತ್ಯೆ ಘಟನೆ ಬಗ್ಗೆ ಸಿಎಂ ಜೊತೆ ಮಾತನಾಡಿದ್ದೇವೆ. ಪ್ರವೀಣ್ ಅಂತ್ಯಕ್ರಿಯೆ ನೆರವೇರಿದೆ. ಪ್ರಕರಣ ಸಂಬಂಧ ಏನೆಲ್ಲ ಬೆಳವಣಿಗೆಯಾಗಿದೆ ಅದನ್ನ ಪ್ರವೀಣ್ ಸೂದ್ ವಿವರಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ. ಸದ್ಯ 10 ಜನರನ್ನ ವಶಕ್ಕೆ ಪಡೆದಿದ್ದಾರೆ. ಕೇರಳಕ್ಕೆ ತೆರಳಿ ಸಹ ಸರ್ಚ್ ಮಾಡುತ್ತಿದ್ದಾರೆ ಎಂದಿದ್ದಾರೆ.
ಕೇರಳಕ್ಕೂ ಪೊಲೀಸರು ತೆರಳಿದ್ದು, ಅಲ್ಲಿಯೂ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ನಾವು ಇಂತಹ ಘಟನೆ ನಡೆದಾಗ ಯಾವ ಪ್ರಕರಣಗಳನ್ನು ಬಿಟ್ಟಿಲ್ಲ, ಎಲ್ಲವೂ ತನಿಖೆಯಾಗಿವೆ. ಕೇರಳ ಸರಕಾರದ ಜೊತೆಗೆ ನಮ್ಮ ಡಿಜಿ ಮಾತನಾಡಿದ್ದಾರೆ, ಜಂಟಿಯಾಗಿ ಕಾರ್ಯಾಚಾರಣೇ ಮಾಡಿ ಆರೋಪಿಗಳನ್ನು ಹಿಡಿದು ತರಲಾಗುತ್ತದೆ ಎಂದು ತಿಳಿಸಿದರು.
ಈಗಾಗಲೇ ಶಂಕಿತರ ಬೆನ್ನು ಹತ್ತಿದ್ದಾರೆ. ಕೇರಳಕ್ಕೆ ಒಂದು ತಂಡ ಕಳಿಸಲಾಗಿದೆ. ಇಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಅನ್ನೋದರ ಬಗ್ಗೆ ತನಿಖೆಯಾಗ್ತಿದೆ. ಕೆಲವು ಶಂಕಿತರನ್ನ ವಶಕ್ಕೆ ಪಡೆಯಲಾಗಿದೆ, ವಿಚಾರಣೆ ನಡೆಯುತ್ತಿದೆ ಎಂದಿದ್ದಾರೆ
ಸಾಮಾಜಿಕ ಜಾಲಾತಾಣದಲ್ಲಿ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿರುವುದರ ಬಗ್ಗೆ ಮಾತನಾಡಿ, ಅಮಾಯಕರು ಕೊಲೆಯಾದಾಗ ಎಲ್ಲರಿಗೂ ನೋವುಂಟಾಗಲಿದೆ, ಮನಸ್ಸು ಕಲಕುತ್ತದೆ, ಸಿಟ್ಟು ಉಂಟಾಗಿ ಮಾತನಾಡುತ್ತಾರೆ, ಆರೋಪಿಗಳನ್ನು ಬಂಧಿಸಿದ ಮೇಲೆ ಅವರ ಆಕ್ರೋಶ ಕಡಿಮೆಯಾಗಲಿದೆ ಎಂದು ತಿಳಿಸಿದರು