ಸಿದ್ದರಾಮಯ್ಯ ಹೇಳಿದ್ದೆಲ್ಲಾ ವೇದವಾಕ್ಯವಲ್ಲ: ಸಿಎಂ ಬಸವರಾಜ ಬೊಮ್ಮಾಯಿ | JANATA NEWS
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ, ಸಿದ್ದರಾಮಯ್ಯ ಅವರು ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಪ್ರತಿಕ್ರಿಯಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಕೊಲೆಗಳಾಗಿವೆ ಎಂದು ಹೇಳಿದ್ದರು. ಇದಕ್ಕೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ 32 ಕೊಲೆಗಳು ನಡೆದಿವೆ. ಅವಾಗ ಅವರು ಏನು ಮಾಡುತ್ತಿದ್ದರು. ರಾಜಕೀಯ ಕಣ್ಣಿಂದ ನೋಡಿದರೆ ಅದೇ ತರ ಕಾಣುತ್ತದೆ. ನಮಗೆ ಗೊತ್ತಿಗೆ ಹೇಗೆ ಕಾನೂನು ಸುವ್ಯವಸ್ಥೆ ನಿಭಾಯಿಸಬೇಕು ಎಂದು ತಿರುಗೇಟು ನೀಡಿದರು.
ಎಸ್ಡಿಪಿಐ, ಪಿಎಫ್ಐ ಸಂಘಟನೆಗಳಿಗೆ ಫಂಡಿಂಗ್ ಮಾಡುತ್ತಿರುವುದೇ ಬಿಜೆಪಿ ಪಕ್ಷ ಎಂಬ ಹೇಳಿಕೆ ಅತ್ಯಂತ ಹಾಸ್ಯಾಸ್ಪದವಾಗಿದೆ. ಇದು ಕಾಂಗ್ರೆಸ್ನ ರಾಜಕೀಯ ದಿವಾಳಿತನವನ್ನು ಬಿಂಬಿಸುತ್ತದೆ. ಸರ್ಕಾರದಲ್ಲಿ ಯಾರೂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಇಂತಹ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಿಲ್ಲ. ಗಟ್ಟಿಯಾಗಿ ನಿಂತು ಕಠಿಣ ನಿಲುವುಗಳನ್ನು ತೆಗೆದುಕೊಂಡು ಕೆಲಸ ಮಾಡಲಾಗುತ್ತಿದೆ ಎಂದರು.
ಈ ಹಿಂದೆ ಐದು ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಎಸ್ಡಿಪಿಐ ಮತ್ತು ಪಿಎಫ್ಐ ಮೇಲಿನ ಕೇಸ್ ತೆಗೆದಿದ್ದೇ ಇದಕ್ಕೆಲ್ಲ ಕಾರಣ. ಈ ಎಲ್ಲಾ ಆರ್ಗನೈಸ್ಡ್ ಕ್ರೈಂ ಮಟ್ಟ ಹಾಕುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು. ಫಾಜಿಲ್ ಕೊಲೆಗೆ ಕಾರಣದ ಪ್ರಾಥಮಿಕ ಮಾಹಿತಿ ನನಗೆ ಗೊತ್ತಿಲ್ಲ. ಪೊಲೀಸರಿಗೆ ಗೊತ್ತಿರಬಹುದು, ತನಿಖೆ ನಡೆಸುತ್ತಿದ್ದಾರೆ ಎಂದ ಸಿಎಂ, ರಿವೆಂಜ್ ಕೊಲೆನಾ ಎಂಬ ಪ್ರಶ್ನೆಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.