Fri,Apr26,2024
ಕನ್ನಡ / English

ಕಾರ್ಯಕ್ರಮಕ್ಕೆ ತಂದೆ ಬರಲಾಗಲಿಲ್ಲ ಎಂದು ಭಾವುಕರಾದ ಹೆಚ್ ಡಿ ಕುಮಾರಸ್ವಾಮಿ! | JANATA NEWS

31 Jul 2022
2767

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ವ್ಯಾಪ್ತಿಯ ಸೋಮನಹಳ್ಳ ಅಮ್ಮನವರ ದೇಗುಲ ಆವರಣದಲ್ಲಿ ಇಂದು ಭಾನುವಾರ ಜೆಡಿಎಸ್ ಸಮಾವೇಶ ಆಯೋಜನೆಗೊಂಡಿತ್ತು.

ಸಮಾವೇಶದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಭಾಷಣ ಮಾಡಿದ್ರು. ಈ ಭಾಷಣವನ್ನು ಮನೆಯಲ್ಲಿ ಕುಳಿತು ಹೆಚ್ ಡಿ ದೇವೇಗೌಡರು ಮನೆಯಲ್ಲಿ ಕುಳಿತಿರುವ ದೃಶ್ಯವನ್ನು ತೋರಿಸಲಾಯಿತು. ದೃಶ್ಯವನ್ನು ಸಮಾವೇಶದ ವೇದಿಕೆಯಲ್ಲಿ ಕಂಡು ಶಾಸಕ ಹೆಚ್​.ಡಿ ರೇವಣ್ಣ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಕಾರ್ಯಕ್ರಮಕ್ಕೆ ತಂದೆ ಬರಲಾಗಲಿಲ್ಲ ಎಂದು ರೇವಣ್ಣ ಭಾವುಕರಾದ್ರು.

ಸೋದರನ ಕಣ್ಣಲ್ಲಿ ನೀರು ಕಂಡು ಹೆಚ್ ಡಿ ರೇವಣ್ಣ ಅವರು ಸಹ ವೇದಿಕೆಯಲ್ಲಿ ಕಣ್ಣೀರು ಹಾಕಿದರು. ಭಾಷಣ ಮುಗಿಸಿ ಟವೆಲ್ ಹಿಡಿದುಕೊಂಡು ಬಂದು ಅಳುತ್ತಾ ಕುಳಿತ ಹೆಚ್ ಡಿಕೆಯನ್ನು ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಸಮಾಧಾನಪಡಿಸಿದರು.

ಕಣ್ಣೀರು ಹಾಕುತ್ತಾ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಸಾಲಮನ್ನಾದಿಂದ ರೈತರಿಗೆ ಬದುಕು ಶಾಶ್ವತವಾಗಿ ಸಿಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲಿಸಿ 5 ವರ್ಷ ನನಗೆ ಆಡಳಿತ ಕೊಟ್ಟರೆ ರೈತರು ಸಾಲಗಾರರಾಗದಿರುವಂತಹ ರೀತಿಯಲ್ಲಿ ನಾನು ಮಾಡುತ್ತೇನೆ. ರಾಜ್ಯಕ್ಕೆ ಯಾವ ರೀತಿ ಯೋಜನೆಗಳನ್ನು ಕೊಡುತ್ತೇನೆ ಎಂದು ಮನೆಮನೆಗೆ ಪ್ರಣಾಳಿಕೆ ಕಳುಹಿಸುತ್ತೇನೆ ಎಂದು ಘೋಷಿಸಿದರು. ನಾಡಿನ ಹೆಣ್ಣುಮಕ್ಕಳು ಸ್ವಾಭಿಮಾನದಿಂದ ಬದುಕಬೇಕು, ಹಳ್ಳಿಯಲ್ಲಿರುವ ಶಿಕ್ಷಣವಂಚಿತ ಹೆಣ್ಣುಮಕ್ಕಳಿಗೆ ಆಸರೆಯಾಗುವ ಯೋಜನೆ ಸಿದ್ಧಪಡಿಸಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಮಾತಾಡಿದ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಮಂಡ್ಯ ಜಿಲ್ಲೆಗೆ ಹೆಚ್. ಡಿ ಕುಮಾರಸ್ವಾಮಿ ಅವರು ಅಪಾರ ಕೊಡುಗೆ ನೀಡಿದ್ದಾರೆ. 2004ರಿಂದ 2008ರ ವರೆಗೆ ಅತಿ ಹೆಚ್ಚು ಪವರ್ ಸ್ಟೇಷನ್ ಕೊಟ್ಟಿದ್ದು ಹೆಚ್.ಡಿ ಕುಮಾರಸ್ವಾಮಿ, ಇಂಧನ ಇಲಾಖೆಗೆ ಇವತ್ತು 29 ಸಾವಿರ ಕೋಟಿ ನಷ್ಟ ಎದುರಿಸುತ್ತಿದೆ. ಮೊದಲು ಇಂಧನ ಇಲಾಖೆ ಕೆಲಸಕ್ಕೆ ಮಂಗಳೂರಿಗೆ ಹೋಗ್ಬೇಕಿತ್ತು. ಚೆಸ್ಕಾಂ ಅಂತಾ ಮೈಸೂರಿನಲ್ಲೇ ಕೆಲಸ ಆಗುವಂತೆ ಮಾಡಿದ್ದು ನಾವು. ಜಿಲ್ಲೆಯ ರಸ್ತೆ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ಕೊಟ್ಟಿದ್ದೆವು. ಮಂಡ್ಯದವರೇ ಸಿಎಂ ಇದ್ದರೂ ಯಾವುದೇ ಬಿಡಿಗಾಸು ಕೊಡಲಿಲ್ಲ. ಮಂಡ್ಯಕ್ಕೆ ಕೊಟ್ಟ ಅನುದಾನ ತಡೆ ಹಿಡಿದಿದ್ದು ಯಡಿಯೂರಪ್ಪ, ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿರುವ ಸರ್ಕಾರ ಬಿಜೆಪಿಯದ್ದು ಎಂದು ರೇವಣ್ಣ ಕಿಡಿಕಾರಿದ್ರು.

RELATED TOPICS:
English summary :HD Kumaraswamy and Revanna are emotional that their father could not come to the program!

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...