ಕಾರ್ಯಕ್ರಮಕ್ಕೆ ತಂದೆ ಬರಲಾಗಲಿಲ್ಲ ಎಂದು ಭಾವುಕರಾದ ಹೆಚ್ ಡಿ ಕುಮಾರಸ್ವಾಮಿ! | JANATA NEWS
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ವ್ಯಾಪ್ತಿಯ ಸೋಮನಹಳ್ಳ ಅಮ್ಮನವರ ದೇಗುಲ ಆವರಣದಲ್ಲಿ ಇಂದು ಭಾನುವಾರ ಜೆಡಿಎಸ್ ಸಮಾವೇಶ ಆಯೋಜನೆಗೊಂಡಿತ್ತು.
ಸಮಾವೇಶದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಭಾಷಣ ಮಾಡಿದ್ರು. ಈ ಭಾಷಣವನ್ನು ಮನೆಯಲ್ಲಿ ಕುಳಿತು ಹೆಚ್ ಡಿ ದೇವೇಗೌಡರು ಮನೆಯಲ್ಲಿ ಕುಳಿತಿರುವ ದೃಶ್ಯವನ್ನು ತೋರಿಸಲಾಯಿತು. ದೃಶ್ಯವನ್ನು ಸಮಾವೇಶದ ವೇದಿಕೆಯಲ್ಲಿ ಕಂಡು ಶಾಸಕ ಹೆಚ್.ಡಿ ರೇವಣ್ಣ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಕಾರ್ಯಕ್ರಮಕ್ಕೆ ತಂದೆ ಬರಲಾಗಲಿಲ್ಲ ಎಂದು ರೇವಣ್ಣ ಭಾವುಕರಾದ್ರು.
ಸೋದರನ ಕಣ್ಣಲ್ಲಿ ನೀರು ಕಂಡು ಹೆಚ್ ಡಿ ರೇವಣ್ಣ ಅವರು ಸಹ ವೇದಿಕೆಯಲ್ಲಿ ಕಣ್ಣೀರು ಹಾಕಿದರು. ಭಾಷಣ ಮುಗಿಸಿ ಟವೆಲ್ ಹಿಡಿದುಕೊಂಡು ಬಂದು ಅಳುತ್ತಾ ಕುಳಿತ ಹೆಚ್ ಡಿಕೆಯನ್ನು ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಸಮಾಧಾನಪಡಿಸಿದರು.
ಕಣ್ಣೀರು ಹಾಕುತ್ತಾ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಸಾಲಮನ್ನಾದಿಂದ ರೈತರಿಗೆ ಬದುಕು ಶಾಶ್ವತವಾಗಿ ಸಿಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆಲ್ಲಿಸಿ 5 ವರ್ಷ ನನಗೆ ಆಡಳಿತ ಕೊಟ್ಟರೆ ರೈತರು ಸಾಲಗಾರರಾಗದಿರುವಂತಹ ರೀತಿಯಲ್ಲಿ ನಾನು ಮಾಡುತ್ತೇನೆ. ರಾಜ್ಯಕ್ಕೆ ಯಾವ ರೀತಿ ಯೋಜನೆಗಳನ್ನು ಕೊಡುತ್ತೇನೆ ಎಂದು ಮನೆಮನೆಗೆ ಪ್ರಣಾಳಿಕೆ ಕಳುಹಿಸುತ್ತೇನೆ ಎಂದು ಘೋಷಿಸಿದರು. ನಾಡಿನ ಹೆಣ್ಣುಮಕ್ಕಳು ಸ್ವಾಭಿಮಾನದಿಂದ ಬದುಕಬೇಕು, ಹಳ್ಳಿಯಲ್ಲಿರುವ ಶಿಕ್ಷಣವಂಚಿತ ಹೆಣ್ಣುಮಕ್ಕಳಿಗೆ ಆಸರೆಯಾಗುವ ಯೋಜನೆ ಸಿದ್ಧಪಡಿಸಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಮಾತಾಡಿದ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಮಂಡ್ಯ ಜಿಲ್ಲೆಗೆ ಹೆಚ್. ಡಿ ಕುಮಾರಸ್ವಾಮಿ ಅವರು ಅಪಾರ ಕೊಡುಗೆ ನೀಡಿದ್ದಾರೆ. 2004ರಿಂದ 2008ರ ವರೆಗೆ ಅತಿ ಹೆಚ್ಚು ಪವರ್ ಸ್ಟೇಷನ್ ಕೊಟ್ಟಿದ್ದು ಹೆಚ್.ಡಿ ಕುಮಾರಸ್ವಾಮಿ, ಇಂಧನ ಇಲಾಖೆಗೆ ಇವತ್ತು 29 ಸಾವಿರ ಕೋಟಿ ನಷ್ಟ ಎದುರಿಸುತ್ತಿದೆ. ಮೊದಲು ಇಂಧನ ಇಲಾಖೆ ಕೆಲಸಕ್ಕೆ ಮಂಗಳೂರಿಗೆ ಹೋಗ್ಬೇಕಿತ್ತು. ಚೆಸ್ಕಾಂ ಅಂತಾ ಮೈಸೂರಿನಲ್ಲೇ ಕೆಲಸ ಆಗುವಂತೆ ಮಾಡಿದ್ದು ನಾವು. ಜಿಲ್ಲೆಯ ರಸ್ತೆ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ಕೊಟ್ಟಿದ್ದೆವು. ಮಂಡ್ಯದವರೇ ಸಿಎಂ ಇದ್ದರೂ ಯಾವುದೇ ಬಿಡಿಗಾಸು ಕೊಡಲಿಲ್ಲ. ಮಂಡ್ಯಕ್ಕೆ ಕೊಟ್ಟ ಅನುದಾನ ತಡೆ ಹಿಡಿದಿದ್ದು ಯಡಿಯೂರಪ್ಪ, ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿರುವ ಸರ್ಕಾರ ಬಿಜೆಪಿಯದ್ದು ಎಂದು ರೇವಣ್ಣ ಕಿಡಿಕಾರಿದ್ರು.