ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಬಿಗ್ ರಿಲೀಫ್: ಕೋರ್ಟ್ನಿಂದ ಸಿಕ್ತು ಜಾಮೀನು | JANATA NEWS
ನವದೆಹಲಿ : ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ.
ದೆಹಲಿಯ ವಿಶೇಷ ನ್ಯಾಯಾಲಯ ಇಂದು ಡಿ.ಕೆ ಶಿವಕುಮಾರ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಇತರೆ ಆರೋಪಿಗಳ ವಿರುದ್ಧ ದೂರು ದಾಖಲಿಸಿರುವ ಇಡಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ಜಾರ್ಜ್ಶೀಟ್ ಸಲ್ಲಿಕೆ ಮಾಡಿತ್ತು. ಜಾರ್ಜ್ಶೀಟ್ ಸಲ್ಲಿಕೆ ಹಿನ್ನೆಲೆ ಹೈಕೋರ್ಟ್ನಿಂದ ಪಡೆದ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಾಗಿ ಪರಿವರ್ತಿಸಲು ಡಿ.ಕೆ. ಶಿವಕುಮಾರ್ ಮತ್ತು ಹೊಸದಾಗಿ ಜಾಮೀನು ನೀಡುವಂತೆ ಇತರೆ ಆರೋಪಿಗಳು ಕೋರ್ಟ್ಗೆ ಮನವಿ ಮಾಡಿದ್ದರು.
ಡಿ.ಕೆ.ಶಿವಕುಮಾರ್ ಮಾತ್ರವಲ್ಲ, ಪ್ರಕರಣದ ನಾಲ್ಕು ಆರೋಪಿಗಳಿಗೂ ಜಾಮೀನು ಅವಧಿಯನ್ನ ವಿಸ್ತರಿಸಿದೆ. ಜಾಮೀನು ನೀಡುವಾಗ ಕೆಲವೊಂದು ಷರತ್ತುಗಳನ್ನು ಕೋರ್ಟ್ ವಿಧಿಸಿದೆ. ಒಬ್ಬರಿಗೆ ತಲಾ ಒಂದು ಲಕ್ಷ ಶ್ಯೂರಿಟಿ. ಆರೋಪಿಗಳು ದೇಶ ಬಿಟ್ಟು ವಿದೇಶಕ್ಕೆ ಹೋಗಬಾರದು. ಸಾಕ್ಷಿಗಳನ್ನ ನಾಶಪಡಿಸಬಾರದು ಎಂಬ ಷರತ್ತುಗಳನ್ನ ವಿಧಿಸಿ ಜಾಮೀನು ನೀಡಲಾಗಿದೆ.