ನಾಲಗೆ ಹೊರಳಿದ ಹಾಗೆಲ್ಲ ಮಾತನಾಡುವುದು ಸರಿಯಲ್ಲ: ಹೆಚ್ಡಿಕೆ | JANATA NEWS
ರಾಮನಗರ : ಮನೆಗೆ ಬೆಂಕಿ ಬಿದ್ದಾಗ ಅಡುಗೆ ಮಾಡಿಕೊಳ್ಳುತ್ತಾರೆ ಎಂದು ಸಚಿವ ಡಾ. ಅಶ್ವತ್ಥನಾರಾಯಣ ಹೇಳಿಕೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸಚಿವರಾದವರು ತಲೆಯಲ್ಲಿ ಪ್ರಜ್ಞೆ ಇಟ್ಟುಕೊಂಡು ಮಾತನಾಡಬೇಕು. ನಾಲಿಗೆ ಹೊರಳಿದ ಹಾಗೆಲ್ಲ ಮಾತನಾಡುವುದು ಸರಿಯಲ್ಲ ಎಂದರು.
ಡಿಕೆ ಸಹೋದರರ ಜತೆ ಆಡಿದ ಆಟವನ್ನು ನನ್ನ ಹತ್ತಿರ ಆಡಿದರೆ ನಡೆಯಲ್ಲ. ಕುಮಾರಸ್ವಾಮಿ ಹತ್ತಿರ ಇದೆಲ್ಲ ಸಾಗುವುದಿಲ್ಲ. ದುಡ್ಡಿನ ಮದದಿಂದ ಅಶ್ವತ್ಥನಾರಾಯಣ ಹೀಗೆ ಮಾತನಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.
25 ಲಕ್ಷ ರೂ. ಕೊಡಲು ಶುರು ಮಾಡಿದ್ದು ಯಾರು? ಒಂದೊಂದು ಕಡೆ ಒದೊಂದು ರೂಲ್ಸ್ ಮಾಡಿದ್ದಾರೆ. ದುಡ್ಡಿನ ಮದದಿಂದ ಮಾತಿನ ಮೇಲೆ ಹಿಡಿತ ಮೀರಬಾರದು ಎಂದರು.
English summary :It is not right to talk like a roll of the tongue: HDK