ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಶಾಲಾ ಬಸ್: 25ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರು | JANATA NEWS
ರಾಮನಗರ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಹಳ್ಳಕ್ಕೆ ಉರುಳಿದ ಪರಿಣಾಮ 25ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ರಾಮನಗರ ಜಿಲ್ಲೆಯ ಹುಲಿಕಲ್ ಗ್ರಾಮದಲ್ಲಿ ನಡೆದಿದೆ .
ಹುಲಿಕಲ್ ಗ್ರಾಮದ ಮಾನಸ ಗಂಗೋತ್ರಿ ಶಾಲಾ ಬಸ್ ಇದಾಗಿದ್ದು, ಬಸ್ನಲ್ಲಿದ್ದ 25ಕ್ಕೂ ಅಧಿಕ ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುವಾಗ ಹುಲಿಕಲ್ ಬಳಿಯ ಹಳ್ಳಕ್ಕೆ ಬಿದ್ದಿದೆ. ಕೆಲವು ಮಕ್ಕಳಿಗೆ ಸಣ್ಣಪುಟ್ಟ ಗಾಯಗೊಂಡಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಈ ಸಂಬಂಧ ಹುಲಿಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :A school bus fell into a ditch after the driver lost control: more than 25 children escaped with their lives.