ಮುಖ್ಯಮಂತ್ರಿ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್, ದೆಹಲಿ ಪ್ರವಾಸ ರದ್ದು | JANATA NEWS
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಸಿಎಂ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಿಎಂ ಮನವಿ ಮಾಡಿದ್ದಾರೆ.
ಸಿಎಂ ಇಂದು ಬೆಳಗ್ಗೆ 11.30ಕ್ಕೆ ದೆಹಲಿಗೆ ತೆರಳಬೇಕಿತ್ತು. ದೆಹಲಿಯಲ್ಲಿ ಸಂಜೆ ಪ್ರಧಾನಿ ನೇತೃತ್ವದಲ್ಲಿ ನಡೆಯಲಿರುವ ಆಜಾದಿ ಕಿ ಅಮೃತ ಮಹೋತ್ಸವದ ರಾಷ್ಟ್ರೀಯ ಸಮಿತಿ ಸಭೆ, ನಾಳೆ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗಿಯಾಗಬೇಕಿತ್ತು. ಜೊತೆಗೆ ಯೋಜನೆ ಆಯೋಗದ ಕಾರ್ಯಕ್ರಮದಲ್ಲಿಯೂ ಬೊಮ್ಮಾಯಿ ಭಾಗವಹಿಸಬೇಕಿತ್ತು. ಆದರೆ, ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಎರಡು ದಿನಗಳ ದೆಹಲಿ ಪ್ರವಾಸ ರದ್ದುಗೊಳಿಸಿದ್ದಾರೆ.