ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್ ಕೋರ್ಸ್ ಗಿಂತ ಬೃಹತ್ ಚಾಪ್ಟರ್ 1, ಚಾಪ್ಟರ್ 2, ಚಾಪ್ಟರ್ 3 ಆಗುತ್ತವೆ; ಬಿಚ್ಚಲೇ? | JANATA NEWS

ಬೆಂಗಳೂರು : ನಕಲಿ ಸರ್ಟಿಫಿಕೇಟ್ ರಾಜ @ ನಕಲಿ ಸರ್ಟಿಫಿಕೇಟ್ ಶೂರ ನನ್ನನ್ನು ಹುಡುಕುತ್ತಿದ್ದಾರೆ. ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ.
ನಿನ್ನಿಂದ ನಾನು ಕಲಿಯಬೇಕಿಲ್ಲ. ನಿನ್ನ ತರ ನಕಲಿ ಸರ್ಟಿಫಿಕೇಟ್ ಕ್ರಿಯೇಟ್ ಮಾಡಿ ದಂಧೆ ನಡೆಸಿಕೊಂಡು ಬಂದಿಲ್ಲ. ನಿನ್ನ ಪಟಾಲಂ ಇಟ್ಕಂಡು, ಎಲ್ಲಿ ತನಿಖೆ ಆಗುತ್ತೆ ಅಂಥ ಕಡತಗಳನ್ನು ಕಾರ್ಪೊರೇಷನ್ ಆಫೀಸ್ ತಂದು ಸುಡುವ ಕೆಲಸ ಮಾಡಿದ್ದಿಯಾ. ಲಾಟರಿ ದಂಧೆ ಮಾಡರೋ, ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡ್ಸೋರು, ಬೆಂಗಳೂರನ್ನು ಲೂಟಿ ಹೊಡೆಯುವವರ ಜೊತೆ ಸೇರಿ ಸರ್ಕಾರ ತೆಗೆಯಲು ಏನೇನ್ ನಡ್ಸಿದ್ದೀಯಾ ನನಗೆ ಗೊತ್ತಿಲ್ವಾ ಎಂದು ಎಚ್ಚರಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರಾವಳಿ ಕೊಲೆಗಳು, ಮಳೆ-ನೆರೆ ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೇನೆ ನಿಜ. ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ?, ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ?. ನನ್ನಲ್ಲೂ ದಾಖಲೆಗಳಿವೆ. ಬಿಚ್ಚಿದರೆ ಅವೇ 'ಸರ್ಟಿಫಿಕೇಟ್ ಕೋರ್ಸ್'ಗಿಂತ ಬೃಹತ್ ಚಾಪ್ಟರ್-1, ಚಾಪ್ಟರ್-2, ಚಾಪ್ಟರ್-3 ಆಗುತ್ತವೆ. ಬಿಚ್ಚಲೇ? ಎಂದು ಗುಡುಗಿದ್ದಾರೆ.
ಕಲಾಪವೆಂದರೆ ಮೈ ಬೆಚ್ಚಗಾಗುತ್ತಾ ಉನ್ನತ ಶಿಕ್ಷಣ ಸಚಿವರೇ?, ನಿಮ್ಮ ಕೌಶಲ್ಯತೆ ಗೊತ್ತಿದೆ. ಅಕ್ರಮ ಮುಚ್ಚಿಕೊಳ್ಳಲು ಅಕ್ರಮದ ದಾಖಲೆಗಳಿದ್ದ ಬಿಬಿಎಂಪಿ ಕಟ್ಟಡಕ್ಕೇ ಬೆಂಕಿ ಹಾಕಿಸಿದ್ದಾ?. ಆಪರೇಷನ್ ಕಮಲದಲ್ಲೂ ಕುಶಲತೆ?, ಕೋಟಿ ಕೋಟಿ ಹಣ ತುಂಬಿಸಿಕೊಂಡು ಹೋಗಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದಾ?, ಕೌಶಲ್ಯ ಮಂತ್ರಿಯಾಗಿದ್ದಕ್ಕೂ ಸಾರ್ಥಕ ಎಂದು ಹೆಚ್ಡಿಕೆ ವ್ಯಂಗ್ಯವಾಡಿದ್ದಾರೆ.
ನಾನು ವಿರೋಧ ಪಕ್ಷದ ನಾಯಕ. ಅಧಿವೇಶನಕ್ಕೆ ಆಗ್ರಹಿಸುವುದು ನನ್ನ ಹಕ್ಕು. ಸದನದಲ್ಲಿ ಉತ್ತರಿಸುವ ಯೋಗ್ಯತೆ ಇದ್ದರೆ ಹಾರಿಕೆ ಉತ್ತರಗಳ ಮೂಲಕ ಜಾರಿಕೊಳ್ಳುವ ಯತ್ನವೇಕೆ?. ಕಲಾಪದಲ್ಲಿ ನನ್ನ ಮೌಲಿಕ ಪಾಲ್ಗೊಳ್ಳುವಿಕೆ ಎಷ್ಟು?, ನಿಮ್ಮದೆಷ್ಟು? ತುಲನೆ ಮಾಡಿಕೊಳ್ಳಿ. ಕಾಮಾಲೆ ಕಣ್ಣುಗಳ ಪೊರೆ ತೆಗೆದು ನೋಡಿ ಅಶ್ವತ್ಥ್ ನಾರಾಯಣ ಎಂದು ಕಿಡಿಕಾರಿದ್ದಾರೆ.
ನನ್ನ ಸರ್ಕಾರವನ್ನು ತೆಗೆಯಲು ಸಮಾಜಘಾತುಕ ಶಕ್ತಿಗಳ ಜೊತೆ ಕೈ ಮಿಲಾಯಿಸಿದ್ದು, ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಜತೆ ಶಾಮೀಲಾಗಿದ್ದು, ಹಣದ ಹೊಳೆ ಹರಿಸಿದ್ದು ಎಲ್ಲವೂ ಗೊತ್ತಿದೆ. ಧೈರ್ಯ ಇದ್ದರೆ ಬಹಿರಂಗ ಚರ್ಚೆಗೆ ಬನ್ನಿ, ಬಿಚ್ಚಿಡಬೇಕು ಎಂದರೆ ಎಲ್ಲವನ್ನೂ ಬಿಚ್ಚಿಡುತ್ತೇನೆ. ಪಠ್ಯ ಪರಿಷ್ಕರಣೆ ಮಾಡಿದಿರಲ್ಲ. ದಾದಿಯರ ನಕಲಿ ಸರ್ಟಿಫಿಕೇಟ್ ಸೃಷ್ಟಿ ಹೇಗೆ?, ಆಪರೇಷನ್ ಕಮಲ ಮಾಡುವುದು ಹೇಗೆ?, ಕದ್ದುಮುಚ್ಚಿ ಹಣ ಸಾಗಿಸಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದು ಹೇಗೆ? ಇದೆಲ್ಲವನ್ನು ಪಠ್ಯದಲ್ಲಿ ಸೇರಿಸಿದ್ದಿದ್ದರೆ ಮುಂದಿನ ಯುವಜನರಿಗೂ ನಿಮ್ಮಂತೆಯೇ ಆಗುವ ಭಾಗ್ಯ ಸಿಗುತ್ತಿತ್ತು ಅಲ್ಲವೇ ಆಪರೇಷನ್ ಅಶ್ವತ್ಥ್ ನಾರಾಯಣ? ಎಂದು ಹೆಚ್ಡಿಕೆ ಕಿಡಿಕಾರಿದ್ದಾರೆ.
ಕರಾವಳಿ ಕೊಲೆಗಳು, ಮಳೆ-ನೆರೆ ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೇನೆ, ನಿಜ. ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ? ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ʼಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, ಚಾಪ್ಟರ್ 2, ಚಾಪ್ಟರ್ 3 ಆಗುತ್ತವೆ; ಬಿಚ್ಚಲೇ? 2/12
— H D Kumaraswamy (@hd_kumaraswamy) August 10, 2022