Sun,May19,2024
ಕನ್ನಡ / English

ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ? | JANATA NEWS

10 Aug 2022
2102

ಬೆಂಗಳೂರು : ನಕಲಿ ಸರ್ಟಿಫಿಕೇಟ್‌ ರಾಜ @ ನಕಲಿ ಸರ್ಟಿಫಿಕೇಟ್‌ ಶೂರ ನನ್ನನ್ನು ಹುಡುಕುತ್ತಿದ್ದಾರೆ. ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ.

ನಿನ್ನಿಂದ ನಾನು ಕಲಿಯಬೇಕಿಲ್ಲ. ನಿನ್ನ ತರ ನಕಲಿ ಸರ್ಟಿಫಿಕೇಟ್ ಕ್ರಿಯೇಟ್ ಮಾಡಿ ದಂಧೆ ನಡೆಸಿಕೊಂಡು ಬಂದಿಲ್ಲ. ನಿನ್ನ ಪಟಾಲಂ ಇಟ್ಕಂಡು, ಎಲ್ಲಿ ತನಿಖೆ ಆಗುತ್ತೆ ಅಂಥ ಕಡತಗಳನ್ನು ಕಾರ್ಪೊರೇಷನ್ ಆಫೀಸ್ ತಂದು ಸುಡುವ ಕೆಲಸ ಮಾಡಿದ್ದಿಯಾ. ಲಾಟರಿ ದಂಧೆ ಮಾಡರೋ, ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡ್ಸೋರು, ಬೆಂಗಳೂರನ್ನು ಲೂಟಿ ಹೊಡೆಯುವವರ ಜೊತೆ ಸೇರಿ ಸರ್ಕಾರ ತೆಗೆಯಲು ಏನೇನ್ ನಡ್ಸಿದ್ದೀಯಾ ನನಗೆ ಗೊತ್ತಿಲ್ವಾ ಎಂದು ಎಚ್ಚರಿಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರಾವಳಿ ಕೊಲೆಗಳು, ಮಳೆ-ನೆರೆ ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೇನೆ ನಿಜ. ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ?, ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ?. ನನ್ನಲ್ಲೂ ದಾಖಲೆಗಳಿವೆ. ಬಿಚ್ಚಿದರೆ ಅವೇ 'ಸರ್ಟಿಫಿಕೇಟ್‌ ಕೋರ್ಸ್‌'ಗಿಂತ ಬೃಹತ್‌ ಚಾಪ್ಟರ್‌-1, ಚಾಪ್ಟರ್-2, ಚಾಪ್ಟರ್‌-3 ಆಗುತ್ತವೆ. ಬಿಚ್ಚಲೇ? ಎಂದು ಗುಡುಗಿದ್ದಾರೆ.

ಕಲಾಪವೆಂದರೆ ಮೈ ಬೆಚ್ಚಗಾಗುತ್ತಾ ಉನ್ನತ ಶಿಕ್ಷಣ ಸಚಿವರೇ?, ನಿಮ್ಮ ಕೌಶಲ್ಯತೆ ಗೊತ್ತಿದೆ. ಅಕ್ರಮ ಮುಚ್ಚಿಕೊಳ್ಳಲು ಅಕ್ರಮದ ದಾಖಲೆಗಳಿದ್ದ ಬಿಬಿಎಂಪಿ ಕಟ್ಟಡಕ್ಕೇ ಬೆಂಕಿ ಹಾಕಿಸಿದ್ದಾ?. ಆಪರೇಷನ್‌ ಕಮಲದಲ್ಲೂ ಕುಶಲತೆ?, ಕೋಟಿ ಕೋಟಿ ಹಣ ತುಂಬಿಸಿಕೊಂಡು ಹೋಗಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದಾ?, ಕೌಶಲ್ಯ ಮಂತ್ರಿಯಾಗಿದ್ದಕ್ಕೂ ಸಾರ್ಥಕ ಎಂದು ಹೆಚ್​ಡಿಕೆ ವ್ಯಂಗ್ಯವಾಡಿದ್ದಾರೆ.

ನಾನು ವಿರೋಧ ಪಕ್ಷದ ನಾಯಕ. ಅಧಿವೇಶನಕ್ಕೆ ಆಗ್ರಹಿಸುವುದು ನನ್ನ ಹಕ್ಕು. ಸದನದಲ್ಲಿ ಉತ್ತರಿಸುವ ಯೋಗ್ಯತೆ ಇದ್ದರೆ ಹಾರಿಕೆ ಉತ್ತರಗಳ ಮೂಲಕ ಜಾರಿಕೊಳ್ಳುವ ಯತ್ನವೇಕೆ?. ಕಲಾಪದಲ್ಲಿ ನನ್ನ ಮೌಲಿಕ ಪಾಲ್ಗೊಳ್ಳುವಿಕೆ ಎಷ್ಟು?, ನಿಮ್ಮದೆಷ್ಟು? ತುಲನೆ ಮಾಡಿಕೊಳ್ಳಿ. ಕಾಮಾಲೆ ಕಣ್ಣುಗಳ ಪೊರೆ ತೆಗೆದು ನೋಡಿ ಅಶ್ವತ್ಥ್​ ನಾರಾಯಣ ಎಂದು ಕಿಡಿಕಾರಿದ್ದಾರೆ.

ನನ್ನ ಸರ್ಕಾರವನ್ನು ತೆಗೆಯಲು ಸಮಾಜಘಾತುಕ ಶಕ್ತಿಗಳ ಜೊತೆ ಕೈ ಮಿಲಾಯಿಸಿದ್ದು, ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಕೋರರ ಜತೆ ಶಾಮೀಲಾಗಿದ್ದು, ಹಣದ ಹೊಳೆ ಹರಿಸಿದ್ದು ಎಲ್ಲವೂ ಗೊತ್ತಿದೆ. ಧೈರ್ಯ ಇದ್ದರೆ ಬಹಿರಂಗ ಚರ್ಚೆಗೆ ಬನ್ನಿ, ಬಿಚ್ಚಿಡಬೇಕು ಎಂದರೆ ಎಲ್ಲವನ್ನೂ ಬಿಚ್ಚಿಡುತ್ತೇನೆ. ಪಠ್ಯ ಪರಿಷ್ಕರಣೆ ಮಾಡಿದಿರಲ್ಲ. ದಾದಿಯರ ನಕಲಿ ಸರ್ಟಿಫಿಕೇಟ್‌ ಸೃಷ್ಟಿ ಹೇಗೆ?, ಆಪರೇಷನ್‌ ಕಮಲ ಮಾಡುವುದು ಹೇಗೆ?, ಕದ್ದುಮುಚ್ಚಿ ಹಣ ಸಾಗಿಸಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದು ಹೇಗೆ? ಇದೆಲ್ಲವನ್ನು ಪಠ್ಯದಲ್ಲಿ ಸೇರಿಸಿದ್ದಿದ್ದರೆ ಮುಂದಿನ ಯುವಜನರಿಗೂ ನಿಮ್ಮಂತೆಯೇ ಆಗುವ ಭಾಗ್ಯ ಸಿಗುತ್ತಿತ್ತು ಅಲ್ಲವೇ ಆಪರೇಷನ್‌ ಅಶ್ವತ್ಥ್​​ ನಾರಾಯಣ? ಎಂದು ಹೆಚ್​​ಡಿಕೆ ಕಿಡಿಕಾರಿದ್ದಾರೆ.

RELATED TOPICS:
English summary :I also have the documents, if unwrapped they will be huge Chapter 1, Chapter 2, Chapter 3 rather than the certificate course; unwrapped

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...