ಅಜ್ಜನಿಂದಲೇ ಮೊಮ್ಮಗನ ಅಪಹರಣ, ಕಾರಣ ಏನು ಗೊತ್ತಾ? | JANATA NEWS
ಉತ್ತರ ಕನ್ನಡ : ಅಜ್ಜನೇ ಮೊಮ್ಮಗನನ್ನು ಕಿಡ್ನ್ಯಾಪ್ ಮಾಡಿಸಿದ ಪ್ರಕರಣ ಭಟ್ಕಳದಲ್ಲಿ ನಡೆದಿದೆ.
ಆಜಾದ್ ನಗರದ 8 ವರ್ಷದ ಬಾಲಕನನ್ನು ಆ.20ರ ರಾತ್ರಿ ಅಪಹರಿಸಲಾಗಿತ್ತು. ಈ ಸಂಬಂಧ ಭಟ್ಕಳ ನಗರ ಠಾಣೆಯಲ್ಲಿ ಮಧ್ಯರಾತ್ರಿ ಪ್ರಕರಣ ದಾಖಲಾಗಿತ್ತು.
ಸಿಸಿಟಿವಿ ದೃಶ್ಯಾವಳಿಯ ನೆರವಿನಿಂದ ಹಾಗೂ ಕುಟುಂಬದವರನ್ನ ವಿಚಾರಣೆ ನಡೆಸಿದಾಗ ಹಣದ ವ್ಯವಹಾರವೇ ಇದಕ್ಕೆ ಕಾರಣ ಎಂಬುದು ತಿಳಿದು ಬಂದಿದೆ. ಕೊಟ್ಟ ಹಣ ವಾಪಸ್ ಪಡೆಯಲು ಸ್ವತಃ ಅಜ್ಜನೇ ಮೊಮ್ಮಗನನ್ನು ಅಪಹರಣ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದಲ್ಲಿರುವ ಬಾಲಕನ ಅಜ್ಜ ಇನಾಯತುಲ್ಲಾ ಮೊಮ್ಮಗನ ಕಿಡ್ನ್ಯಾಪ್ಗೆ ಸ್ಕೆಚ್ ಹಾಕಿರುವ ಆರೋಪಿ. ಬಾಲಕನ ತಾಯಿಯ ಸಂಬಂಧಿಯಾಗಿರುವ ಇನಾಯತುಲ್ಲಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.
ಐವರು ಆರೋಪಿಗಳು ಇದರಲ್ಲಿ ಭಾಗಿಯಾಗಿದ್ದರು ಎಂಬುದು ತಿಳಿದು ಬಂದಿದೆ. ಓರ್ವನನ್ನು ಬಂಧಿಸಲಾಗಿದ್ದು, ನಾಲ್ವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಭಟ್ಕಳ ಬದ್ರಿಯಾ ನಗರದ ನಿವಾಸಿ ಕೋಳಿ ಅಂಗಡಿ ನಡೆಸುತ್ತಿದ್ದ ಅನೀಸ್ ಭಾಷಾ ಬಂಧಿತ ಆರೋಪಿ. ಬಾಲಕನ ಅಜ್ಜನ ಸೂಚನೆಯಂತೆ ಅನೀಸ್ ಭಾಷಾ ತಂಡದೊಂದಿಗೆ ಕಿಡ್ನ್ಯಾಪ್ ಮಾಡಿದ್ದಾನೆ.