ಕೆಂಪಣ್ಣರನ್ನು ಮೆಂಟಲ್ ಆಸ್ಪತ್ರೆಗೆ ಕಳುಹಿಸಿ ಚೆಕ್ ಮಾಡಿಸಬೇಕು | JANATA NEWS
ಬೆಂಗಳೂರು : ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನನ್ನು ಮೆಂಟಲ್ ಆಸ್ಪತ್ರೆಗೆ ಕಳುಹಿಸಿ ಚೆಕ್ ಮಾಡಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್ ಪ್ರಾಯೋಜಿತ ಅನ್ನೋದು ಸ್ಪಷ್ಟವಾಗುತ್ತಿದೆ. ಆ ಮನುಷ್ಯನನ್ನು ಮೆಂಟಲ್ ಆಸ್ಪತ್ರೆ ಕಳಿಸೋದು ಒಳಿತು. ನ್ಯಾಯಾಂಗ ತನಿಖೆ ಆಗಬೇಕು ಅಂತಾರೆ. ಅವರು ಕಂಪ್ಲೆಂಟ್ ಕೊಡಬೇಕಲ್ಲ ಎಂದು ಪ್ರಶ್ನಿಸಿದ ಅವರು, ದಾಖಲೆ ಕೊಟ್ಟರೆ ಅದರ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ಮಾನನಷ್ಟ ಮೊಕದ್ದಮೆ ಹಾಕುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯಾವ ಮಂತ್ರಿ ಮೇಲೆ ಆರೋಪ ಮಾಡಿದ್ದಾರೋ ಅ ಮಂತ್ರಿಗಳು ಕೆಂಪಣ್ಣ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಿ. ನ್ಯಾಯಾಂಗ ತನಿಖೆ ಬಗ್ಗೆ ಸಿಎಂ ಬೊಮ್ಮಾಯಿ ನಿರ್ಧಾರ ಮಾಡ್ತಾರೆ. ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.