ಮುರುಘಾ ಶ್ರೀ ಮೇಲಿನ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆಯಾಗಿ ಸತ್ಯಾಂಶ ಹೊರಬರಬೇಕು | JANATA NEWS
ಬೆಂಗಳೂರು : ಮುರುಘಾ ಶ್ರೀಗಳ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಚಿತ್ರದುರ್ಗ ಮುರುಘಾ ಮಠ ಸ್ವಾಮೀಜಿ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೇ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
RELATED TOPICS:
English summary :An impartial investigation into the complaint against Mr. Muruga should bring out the truth