ಪ್ರೀಯಕರನ ಜತೆ ಹೋಟೆಲ್ಗೆ ಹೋದ ವಿದ್ಯಾರ್ಥಿನಿ ಬರ್ಬರವಾಗಿ ಕೊಲೆ, ಪ್ರೀಯಕರ ಅರೆಸ್ಟ್ | JANATA NEWS
ಮೈಸೂರು : ಪ್ರೀಯಕರನ ಜತೆ ಹೋಟೆಲ್ಗೆ ಹೋದ ವಿದ್ಯಾರ್ಥಿನಿ ಬರ್ಬರವಾಗಿ ಕೊಲೆಗಿದ್ದಾಳೆ. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಯುವತಿಯನ್ನು, ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಪೂರ್ವ ಶೆಟ್ಟಿ (21) ಕೊಲೆಗೀಡಾದ ಯುವತಿಯಾಗಿದ್ದು, ಪ್ರೀಯಕರ ಆಶಿಕ್ (28) ಬಂಧಿತ ಆರೋಪಿಯಾಗಿದ್ದಾನೆ. ಕೊಲೆಯಾದ ಅಪೂರ್ವ ಶೆಟ್ಟಿಯನ್ನು ಆರೋಪಿ ಆಶಿಕ್ ಪ್ರೀತಿಸುತ್ತಿದ್ದ ಎನ್ನಲಾಗಿದೆ.
ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ಹಲವು ವರ್ಷಗಳಿಂದ ಆಶಿಕ್ ಎಂಬ ಯುವಕನ ಜತೆ ಓಡಾಡುತ್ತಿದ್ದಳು. ಎರಡು ದಿನಗಳ ಹಿಂದೆ ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಆಶಿಕ್ ಜತೆ ರೂಂ ಬಾಡಿಗೆ ಪಡೆದು ವಾಸ್ತವ್ಯ ಹೂಡಿದ್ದರು. ಆಶಿಕ್ ಆಗಾಗ ಹೊರಗಡೆ ಹೋಗಿ ಮತ್ತೆ ಹೋಟೆಲ್ಗೆ ವಾಪಸ್ ಬರುತ್ತಿದ್ದ. ನಿನ್ನೆ ಬೆಳಗ್ಗೆ ಹೋಟೆಲ್ನಿಂದ ಹೊರಟ ಆಶಿಕ್ ಮತ್ತೆ ವಾಪಸ್ ಹೋಟೆಲ್ಗೆ ಬಂದಿರಲಿಲ್ಲ.
ಆಕೆ ಸಂಜೆಯಾದರೂ ಹೋಟೆಲ್ನಿಂದ ಹೊರ ಬಾರದ ಕಾರಣ ಅನುಮಾನಗೊಂಡು ಹೋಟೆಲ್ ಸಿಬ್ಬಂದಿ ರೂಂನಲ್ಲಿದ್ದ ಇಂಟರ್ ಕಾಂಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದಿದ್ದಾಗ ಅನುಮಾನಗೊಂಡ ಸಿಬ್ಬಂದಿ, ದೇವರಾಜ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಹೋಟೆಲ್ನಲ್ಲಿ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಈ ಗಲಾಟೆಯಲ್ಲಿ ಆರೋಪಿ ಆಶಿಕ್, ಅಪೂರ್ವ ಶೆಟ್ಟಿಯ ಮೇಲೆ ಹಲ್ಲೆ ಮಾಡಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಪ್ರೇಯಿಸಿಯನ್ನು ಕೊಲೆ ಮಾಡಿದ ಬಳಿಕ ಹೋಟೆಲ್ ರೂಮ್ನಿಂದ ಎಸ್ಕೇಪ್ ಆಗಿದ್ದ ಎನ್ನಲಾಗಿದೆ.
ಬಳಿಕ ಹೋಟೆಲ್ನಿಂದ ಹೊರಟಿದ್ದ ಆಶಿಕ್ ಕೂಡ ಪಿರಿಯಾಪಟ್ಟಣದ ಕಂಪ್ಲಾಪುರ ಬಳಿ ಆತ್ಮಹತ್ಯೆಗೆ ಯತ್ನಿಸಿ ವಿಫಲನಾಗಿದ್ದನು. ಆಶಿಕ್ನ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆತನಿದ್ದ ಸ್ಥಳವನ್ನು ಪತ್ತೆ ಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.