ಮಕ್ಕಳ ಹಾಸ್ಟೆಲ್ ಬೆಡ್ ಶೀಟ್ ಎಲ್ಲಾ ಬದಲಾಗಿದೆ, ಎಲ್ಲಾ ಸಾಕ್ಷ್ಯನಾಶ ಮಾಡಿದ್ದಾರೆ, ಶ್ರೀಗಳು ಯಾವುದೇ ಸಾಕ್ಷ್ಯ ಉಳಿಸಿಲ್ಲ | JANATA NEWS
ಮೈಸೂರು : ಮುರುಘ ಶರಣರ ಪ್ರಕರಣದಲ್ಲಿ ಸಾಕ್ಷ್ಯ ನಾಶವಾಗಿ ಹೋಗಿದೆ. ಮಕ್ಕಳ ಹಾಸ್ಟೆಲ್ ಬೆಡ್ ಶೀಟ್ ಎಲ್ಲಾ ಬದಲಾಗಿದೆ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸಾಕ್ಷ್ಯಗಳನ್ನು ನಾಶ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಮುರುಘಾ ಶ್ರೀಗಳಿಂದ ಧರ್ಮ ಪೀಠಗಳಲ್ಲಿ ಬಿರುಗಾಳಿ ಎಬ್ಬಿಸಿದೆ. ಪೊಲೀಸರು ಇಡೀ ಕೇಸ್ ಅನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದರು. ಪ್ರಕರಣದ ನ್ಯಾಯಾಧೀಶರಿಗೆ ಅಭಿನಂದನೆ. ಒಡನಾಡಿಯ ಪರಶು ಸ್ಟ್ಯಾನ್ಲಿ ಅವರ ಕಾರ್ಯ ಶ್ಲಾಘನೀಯ. ಅವರ ಮೇಲೆ ಬೆದರಿಕೆ ಶುರುವಾಗಿದೆ. ಯಾವುದೇ ಆಮಿಷಗಳು ಧಮ್ಕಿ ಹಣಕ್ಕೆ ಹೆದರದೆ ಕೆಲಸ ಮಾಡಿದೆ. ಮೈಸೂರು, ಚಿತ್ರದುರ್ಗ, ಬೆಂಗಳೂರು ಸುತ್ತಿ ಕೆಲಸ ಮಾಡಿದ್ದಾರೆ. ಪರಶು ಸ್ಯ್ಟಾನ್ಲಿ ಅವರ ಸದಸ್ಯರು ಅಭಿನಂದನಾರ್ಹರು ಎಂದು ಹೇಳಿದರು.
ಆರೋಪಿಗಳನ್ನು ಮಠದ ಒಳಗೆ ಓಡಾಡಲು ಬಿಟ್ಟು ಸಾಕ್ಷ್ಯ ನಾಶಕ್ಕೆ ಅವಕಾಶ ಮಾಡಿಕೊಡಲಾಯಿತು. ಸ್ವಾಮೀಜಿಗಳು ಮಲಗುವ ಬೆಡ್, ಬೆಡ್ ಶೀಟ್ಗಳು ಎಲ್ಲವೂ ಬದಲಾಗಿ ಸಾಕ್ಷ್ಯ ನಾಶ ಮಾಡಲಾಗಿದೆ. ಈ ಪ್ರಕರಣದಲ್ಲಿ ಸತ್ಯನಾಶವಾಗಿದೆ ಎಂದು ಕಿಡಿಕಾರಿದರು.
ಪ್ರಕರಣದ ಆರೋಪಿಗಳು ಮಠದಲ್ಲೇ ಇದ್ದಾರೆ. ಕೆಲವು ಮಂತ್ರಿಗಳು, ಮಾಜಿ ಮಂತ್ರಿಗಳು ಸ್ವಾಮೀಜಿ ಪರವಾಗಿ ಮಾತನಾಡುತ್ತಾರೆ. ಲೈಂಗಿಕ ದೌರ್ಜನ್ಯ ಮಾಡಿದ ಸ್ವಾಮೀಜಿ ಪರವಾಗಿ ಮಾತನಾಡುವುದನ್ನು ನಿಲ್ಲಿಸಿ. ಸ್ವಾಮೀಜಿಯಿಂದ ನಾಡಿಗೆ ಕಳಂಕ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅವರು ಇಡೀ ಮಠದ ಪರಂಪರೆಗೆ ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.. ಮುಂದೆ ಸಂಸಾರಿಗಳೇ ಮಠಾಧೀಶರಾಗಲಿ. ಮದುವೆಯಾಗದವರು ಬಂದು ಮಾಡಿರೋದನ್ನು ನಾವು ನೋಡಿದ್ದೇವೆ. ನಮ್ಮಲ್ಲಿ ಸಾಕಷ್ಟು ಪೀಠಾಧಿಪತಿಗಳಿದ್ದಾರೆ ಆದರೆ ಬ್ರಹ್ಮಚಾರಿಗಳಿಲ್ಲ ಎಂದು ಹೇಳಿದರು.
ಚಿಕ್ಕಪ್ಪ, ಅಪ್ಪ ಯಾರು ಸಂಬಂಧ ಇಲ್ಲ. ಮಕ್ಕಳ ಹೇಳಿಕೆ ಮಾತ್ರ ಮುಖ್ಯ. ಮಕ್ಕಳು ಪೊಲೀಸ್ ಕೋರ್ಟ್ ಬೇರೆ ಯಾರು ತಲೆ ಹಾಕುವಂತಿಲ್ಲ. ಇದರಲ್ಲಿ ಷಡ್ಯಂತರ ಅಥವಾ ಬೇರೆ ಏನು ಇಲ್ಲ. ಇನ್ನು ಏನಾದರೂ ಇದ್ದರೆ ಅದನ್ನು ಬಯಲಿಗೆಳೆಯಬೇಕು ಎಂದು ಮೈಸೂರಿನಲ್ಲಿ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿಕೆ ನೀಡಿದರು.