ಅನುಭವಿ ನಾಯಕನ ಅಗಲಿಕೆಯ ವಿಚಾರ ತಿಳಿದು ತುಂಬಾ ದುಃಖವಾಗಿದೆ: ಪ್ರಧಾನಿ ಮೋದಿ | JANATA NEWS

ನವದೆಹಲಿ : ಸಚಿವ ಉಮೇಶ್ ಕತ್ತಿ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದು, ರಾಜಕೀಯ ನಾಯಕರುಗಳು ಮತ್ತು ಗಣ್ಯರು ಕಂಬನಿ ಮಿಡಿದಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿ, ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ಉಮೇಶ್ ಕತ್ತಿ ಅಪಾರ ಕೊಡುಗೆಗಳನ್ನ ನೀಡಿದ್ದರು. ಉತ್ಕೃಷ್ಟ ಕೊಡುಗೆಗಳನ್ನ ನೀಡಿದ್ದ ಅನುಭವಿ ನಾಯಕನ ಅಗಲಿಕೆಯ ವಿಚಾರ ತಿಳಿದು ತುಂಬಾ ದುಃಖವಾಗಿದೆ. ಅವರ ಕುಟುಂಬಕ್ಕೆ, ಬೆಂಬಲಿಗರಿಗೆ ದು:ಖ ಭರಿಸುವ ಶಕ್ತಿ ಸಿಗಲಿ. ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಚಿವ ಉಮೇಶ್ ಕತ್ತಿ ಪತ್ನಿ ಶೀಲಾ ಕತ್ತಿಗೆ ಪತ್ರದ ಮೂಲಕ ಸಾಂತ್ವನ ಹೇಳಿದ್ದಾರೆ.
Shri Umesh Katti Ji was an experienced leader who made rich contributions to Karnataka’s development. Pained by his demise. My thoughts are with his family and supporters in this tragic hour. Om Shanti.
— Narendra Modi (@narendramodi) September 7, 2022