Tue,Sep26,2023
ಕನ್ನಡ / English

ಗಂಡ-ಹೆಂಡತಿ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯ! | JANATA NEWS

07 Sep 2022
3023

ಶಿವಮೊಗ್ಗ : ಪತಿ-ಪತ್ನಿ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ನಗರದ ಬೈಪಾಸ್ ರಸ್ತೆಯ ಪ್ರಿಯಾಂಕಾ ಲೇಔಟ್‌ನಲ್ಲಿ ಸಂಭವಿಸಿದೆ.

ಮೃತರನ್ನು ಮಂಜುಳಾ (35) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಮೆಸ್ಕಾಂ ನೌಕರ ದಿನೇಶ್ ಎಂಬಾತ 12 ವರ್ಷದ ಹಿಂದೆ ಶಿವಮೊಗ್ಗ ತಾಲೂಕಿನ ಮತ್ತಿಘಟ್ಟ ಗ್ರಾಮದ ಮಂಜುಳಾ ಅವರೊಂದಿಗೆ ಮದುವೆಯಾಗಿದ್ದ. ದಂಪತಿಗೆ 10 ಮತ್ತು 4 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಚಾಕುವಿನಿಂದ ಕತ್ತಿಗೆ ಚುಚ್ಚಿದ ಸ್ಥಿತಿಯಲ್ಲಿ ಮಂಜುಳಾ ಶವ ಪತ್ತೆಯಾಗಿದೆ. ಪತ್ನಿಯನ್ನು ಕೊಂದ ಬಳಿಕ ಪತಿ ದಿನೇಶ್ ತನ್ನ ಕೈಯನ್ನೂ ಚಾಕುವಿನಿಂದ ಕತ್ತರಿಸಿ ಕೊಂಡಿದ್ದಾನೆ. ಮಕ್ಕಳು ಬೆಳಿಗ್ಗೆ ಎದ್ದು ನೋಡಿದಾಗ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ತಂದೆ ಪ್ರಜ್ಞೆ ತಪ್ಪಿ ಬಿದ್ದಿರುವುದನ್ನು ಕಂಡಿದ್ದಾರೆ.

ಕೂಡಲೇ ಮಕ್ಕಳು ಸಂಬಂಧಿಕರಿಗೆ ವಿಷಯ ತಿಳಿಸಿದ್ದಾರೆ. ಸಂಬಂಧಿಕರು ಬಂದು ದಿನೇಶ್‌ನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ದಿನೇಶ್ ಪ್ರತಿದಿನ ಮನೆಗೆ ತಡವಾಗಿ ಬರುತ್ತಿದ್ದ. ಇದೇ ಕಾರಣಕ್ಕೆ ದಂಪತಿ ನಡುವೆ ಜಗಳವಾಗುತ್ತಿತ್ತು. ಮಂಗಳವಾರ ರಾತ್ರಿಯೂ ಇದೇ ವಿಚಾರಕ್ಕೆ ದಂಪತಿ ಜಗಳವಾಡಿದ್ದಾರೆ. ಮಾತಿಗೆ ಮಾತು ಬೆಳೆದು ದಿನೇಶ್ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಪತ್ನಿ ಮಂಜುಳಾ ಅವರ ಕುತ್ತಿಗೆ ಕೊಯ್ದಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಂಜುಳಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಟ್ಟಿನಿಂದ ಕೊಲೆ ಮಾಡಿದ ದಿನೇಶ್, ಹೆದರಿ ತಾನೂ ಬ್ಲೇಡ್‌ನಿಂದ ಕೈಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ

ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Husband-wife fight ends in wife murder!

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...