ನೀರಿನ ರಭಸಕ್ಕೆ ಹಳ್ಳದ ನೀರಿನಲ್ಲಿ ಕೊಚ್ಚಿಹೋದ ಯುವತಿ | JANATA NEWS
ಕಲಬುರಗಿ: : ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಳೆಯ ಅರ್ಭಟ ಜೋರಾಗಿದ್ದು, ನೀರಿನ ರಭಸಕ್ಕೆ ಹಳ್ಳದಲ್ಲಿ ಯುವತಿ ಕೊಚ್ಚಿಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗುಳಿ ಗ್ರಾಮದಲ್ಲಿ ನಡೆದಿದೆ.
ಲಾಡಮುಗಳಿ ಗ್ರಾಮದ ದಾನೇಶ್ವರಿ (18) ಹಳ್ಳದಲ್ಲಿ ಕೊಚ್ಚಿ ಹೋಗಿರುವ ಯುವತಿ ಎಂದು ಗುರುತಿಸಲಾಗಿದೆ.
ಶುಕ್ರವಾರ ಮಧ್ಯಾಹ್ನ ತಾಯಿಯ ಜೊತೆ ಊರ ಹೊರಗೆ ಇರುವ ಹಳ್ಳಕ್ಕೆ ಬಟ್ಟೆ ತೊಳೆಯೋದಕ್ಕೆ ಹೋಗಿದ್ದ ದಾನೇಶ್ವರಿ, ಬಟ್ಟೆ ತೊಳೆಯುವಾಗ ನೀರಿನ ರಭಸ ಹೆಚ್ಚಾಗಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾಳೆ.
ನಿನ್ನೆಯಿಂದ ದಾನೇಶ್ವರಿ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ, ಎಸ್ಡಿಆರ್ಎಪ್ ತಂಡದಿಂದ ಶೋಧ ನಡೆಸಲಾಗುತ್ತಿದ್ದು, ನಿನ್ನೆ ಶವ ಸಿಗದ ಹಿನ್ನೆಲೆಯಲ್ಲಿ ಇಂದು ಮತ್ತೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.