Thu,Nov30,2023
ಕನ್ನಡ / English

ಹಿಂದೂ ವಿರೋಧಿ ಪಾಸ್ಟರ್ ಜಾರ್ಜ್ ಪೊನ್ನಯ್ಯ ಹೇಳಿಕೆಯನ್ನು ಅನುಮೋದಿಸುತ್ತಿದ್ದಾರೆ ರಾಹುಲ್ ಗಾಂಧಿ - ಬಿಜೆಪಿ | JANATA NEWS

10 Sep 2022
2237

ಚೆನ್ನೈ : ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ಶುಕ್ರವಾರ ಹಿಂದೂ ದ್ವೇಷಿ ಮತ್ತು ವಿವಾದಿತ ಕ್ಯಾಥೋಲಿಕ್ ಪಾದ್ರಿ ಜಾರ್ಜ್ ಪೊನ್ನಯ್ಯ ಅವರನ್ನು ರಾಹುಲ್ ಗಾಂಧಿ ಭೇಟಿ ಮಾಡಿದ್ದರಿಂದ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ(ಭಾರತ ಸೇರಿಸು) ಯಾತ್ರೆ ಭಾರೀ ಟೀಕೆಗಳನ್ನು ಎದುರಿಸಿತು.

ಕಳೆದ ವರ್ಷ ಜುಲೈನಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಪಾಸ್ಟರ್ ಜಾರ್ಜ್ ಪೊನ್ನಯ್ಯ ಅವರನ್ನು ಬಂಧಿಸಲಾಗಿತ್ತು.

ಪುಲಿಯೂರುಕುರಿಚಿಯ ಮುಟ್ಟಿಡಿಚನ್ ಪರೈ ಚರ್ಚ್‌ನಲ್ಲಿ ಶುಕ್ರವಾರ ಬೆಳಿಗ್ಗೆ ವಿರಾಮಕ್ಕಾಗಿ ಕ್ಯಾಂಪ್ ಮಾಡಿದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು.

ತಮಿಳುನಾಡು ಪಾದ್ರಿಯೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಂವಾದದ ವಿಡಿಯೋ ಕ್ಲಿಪ್ ವೈರಲ್ ಆಗಿದ್ದು, ಅದರಲ್ಲಿ ರಾಹುಲ್ ಗಾಂಧಿ "ಯೇಸು ಕ್ರಿಸ್ತ ದೇವರ ರೂಪವೇ? ಅದು ಸರಿಯೇ?" ಎಂದು ಕೇಳುತ್ತಿದ್ದಾರೆ. ಅದಕ್ಕೆ ತಮಿಳುನಾಡಿನ ಅರ್ಚಕ ಜಾರ್ಜ್ ಪೊನ್ನಯ್ಯ, "ಅವನೇ ನಿಜವಾದ ದೇವರು" ಎಂದು ಉತ್ತರಿಸಿದ್ದಾನೆ.

ಪೊನ್ನಯ್ಯ ಮಾತನಾಡಿ, "ದೇವರು ತನ್ನನ್ನು (ಸ್ವತಃ) ಒಬ್ಬ ಮನುಷ್ಯ, ನಿಜವಾದ ವ್ಯಕ್ತಿ ಎಂದು ಬಹಿರಂಗಪಡಿಸುತ್ತಾನೆ ... ಶಕ್ತಿ ಅಥವಾ ಇವೆಲ್ಲವ ತರ ಅಲ್ಲ ... ಆದ್ದರಿಂದ ನಾವು ಮಾನವ ವ್ಯಕ್ತಿಯನ್ನು ನೋಡುತ್ತೇವೆ."

ಪೊನ್ನಯ್ಯ ಅವರು ಈ ಹಿಂದೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಸಂಕಷ್ಟಕ್ಕೆ ಸಿಲುಕಿದ ಇತಿಹಾಸ ಇದೆ. ಕಳೆದ ವರ್ಷ ಜುಲೈನಲ್ಲಿ ಮಧುರೈನ ಕಲ್ಲಿಕುಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಡಿಎಂಕೆ ಸಚಿವರು ಮತ್ತು ಇತರರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಈತನನ್ನು ಬಂಧಿಸಲಾಗಿತ್ತು.

ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಾಧ್ಯಮಗಳೊಂದಿಗೆ ಮಾತನಾಡಿದ ಶೆಹಜಾದ್, ಇದು ಭಾರತ್ ಜೋಡೋ ಅಲ್ಲ, ಆದರೆ ರಾಹುಲ್ ಗಾಂಧಿಯವರ ಭಾರತ್ ಥೋಡೋ ಔರ್ ನಫ್ರತ್ ಜೋಡೋ(ಭಾರತ ಒಡೆಯುವ ಮತ್ತು ದ್ವೇಷ ಸೇರಿಸು) ಅಭಿಯಾನ ಆಗಿದೆ. ಅದಕ್ಕಾಗಿಯೇ ಅವರು ಜಾರ್ಜ್ ಪೊನ್ನಯ್ಯ ಅವರಂತಹ ವ್ಯಕ್ತಿಯನ್ನು ಭೇಟಿಯಾದರು, ಅವರನ್ನು ಸ್ಥಳೀಯ ಪೊಲೀಸರು ಹಿಂದೂ ಮತ್ತು ಇಡೀ ಭಾರತ ಮತ್ತು ಭಾರತ ಮಾತೆಯ ವಿರುದ್ಧ ದ್ವೇಷದ ಭಾಷಣಕ್ಕಾಗಿ ಬಂಧಿಸಿದ್ದಾರೆ.

ಅವರು ಮತ್ತಷ್ಟು ಹೇಳಿದರು, "ಶಕ್ತಿಗಿಂತ(ಮತ್ತು ಇತರ ಹಿಂದೂ ದೇವರು) ಭಿನ್ನವಾಗಿ ಯೇಸು ಒಬ್ಬನೇ ದೇವರು, ಎಂದು ರಾಹುಲ್ ಗಾಂಧಿಗೆ ಹೇಳುವ ಜಾರ್ಜ್ ಪೊನ್ನಯ್ಯ ಅವರು ಮೊದಲು ತಮ್ಮ ಮತಾಂಧ ಹೇಳಿಕೆಗಾಗಿ ಬಂಧಿಸಲ್ಪಟ್ಟರು, "ಭಾರತ ಮಾತೆಯ ಕಲ್ಮಶಗಳಿಂದ ನನ್ನನ್ನು ಕಲುಷಿತಗೊಳಿಸಬಾರದು ಎಂದು ನಾನು ಪಾದರಕ್ಷೆಗಳನ್ನು ಧರಿಸುತ್ತೇನೆ ಎಂದು ಹೇಳಿದ್ದು, ಅಂತಹ ವ್ಯಕ್ತಿಗೆ ವೇದಿಕೆ ನೀಡುವ ಮೂಲಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಅನುಮೋದಿಸುತ್ತಿದ್ದಾರೆ, ಎಂದು ಪೂನವಾಲಾ ಆರೋಪಿಸಿದ್ದಾರೆ.

English summary :Rahul Gandhi endorsing anti-Hindu Pastor George Ponnaiahs statement - BJP

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...